25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜು

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಜೂ. 19ರಂದು 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪೋಷಕರ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭಾ ವೇದಿಕೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಗಣಿತ ತಜ್ಞ ಹಾಗೂ ಪ್ರಸಕ್ತ ಕಾಯರ್ತಡ್ಕ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯಾಕೂಬ್ ಎಸ್ ಕೊಯ್ಯೂರು, ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯ ಉಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಪೋಷಕರೊಂದಿಗೆ ಸಂವಾದ ನಡೆಸಿದ ಯಾಕೂಬ್ ರವರು ಮಕ್ಕಳ ನಡತೆಯನ್ನು ಸರಿಪಡಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು, ಎಂತಹ ವ್ಯಕ್ತಿಯನ್ನು ಬದಲಿಸುವ ಶಕ್ತಿ ತಾಯಿಗಿದೆ, ಅನೇಕ ಸಾಧಕರು ಸಾಗಿದ ಕಷ್ಟದ ಹಾದಿಯನ್ನು ಮಕ್ಕಳಿಗೆ ತಿಳಿಸಿ ಕಷ್ಟದ ಬದುಕಿನ ಅರಿವನ್ನು ಮೂಡಿಸಬೇಕು ಎಂದು ಹಲವಾರು ಉದಾಹರಣೆಗಳ ಮೂಲಕ ಪೋಷಕರಿಗೆ ಮನವರಿಕೆ ಮಾಡಿದರು.

2025-26 ನೇ ಸಾಲಿನ ಶಾಲಾ ವಾರ್ಷಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿಯನ್ನು ನೀಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ರವರು ಮಕ್ಕಳನ್ನು ಭವಿಷ್ಯದ ಶ್ರೇಷ್ಠ ಪ್ರಜೆಯನ್ನಾಗಿಸುವುದು ಪೋಷಕರ ಕೈಯಲ್ಲಿದೆ ಎಂಬುದನ್ನು ಪ್ರಾತ್ಯಕ್ಷಿಕ ಚಟುವಟಿಕೆಯ ಮೂಲಕ ಪೋಷಕರಿಗೆ ವಿವರಿಸಿ ಮಗುವನ್ನು ಸರಿಯಾದ ದಾರಿಯಲ್ಲಿ ಬೆಳೆಸುವಲ್ಲಿ ಪೋಷಕರಿಗೆ ಮತ್ತು ಶಿಕ್ಷಕರಿಗೆ ದೇವರು ಮಾರ್ಗದರ್ಶನವನ್ನು ಮಾಡಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯರಾದ ಮುಹಮ್ಮದ್ ಶರೀಫ್ ಸಖಾಫಿ ಬೆದ್ರಬೆಟ್ಟು ಇವರು ಶಾಲಾ ಅರೇಬಿಕ್ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!