32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ ಸಖಿಯರಿಗೆ ಹಾಗೂ ಪ್ರಗತಿಪರ ರೈತರಿಗೆ ಎಣ್ಣೆ ತಾಳೆ ಬೆಳೆ ಬೇಸಾಯ ಹಾಗೂ ಇಲಾಖಾ ಯೋಜನೆಗಳ ಮಾಹಿತಿಯ ಮೆಗಾ ಡ್ರೈವ್ ಕಾರ್ಯಕ್ರಮ ಜೂ.19 ರಂದು ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ನಡೆಯಿತು.

ಅಡಿಕೆ ಹಳದಿ ರೋಗ, ದರ ಕುಸಿತ , ಹವಾಮಾನ ವೈಪರೀತ್ಯದಿಂದ ಕೃಷಿಕರು ಹೈರಾಣಾದ ಬಳಿಕ ಪರ್ಯಾಯ ಬೆಳೆಯಾಗಿ ಕಾಫಿ ಕಾಳುಮೆಣಸು ಇನ್ನಿತರ ಬೆಳೆಗಳಂತೆ ತಾಳೆ ಬೆಳೆ ಪರಿಚಯವಾಗಿದ್ದು ತಾಳೆ ಬೇಸಾಯಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇತ್ತಿಚೀನ ದಿನಗಳಲ್ಲಿ ತಾಳೆ ಎಣ್ಣೆ ಬೆಲೆ ಏರಿಕೆಯಾಗಿ ಬೆಳೆಗಾರರಿಗೆ ಲಾಭದಾಯಕವಾಗಿದೆ. ಇದೀಗ ಹೊಸ ತಳಿ ತಾಳೆ ಬೆಳೆಯಲ್ಲಿ ಪರಿಚಯಿಸಲಾಗಿದೆ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಎನ್.ಆರ್.ಎಲ್.ಎಮ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಬೆಳ್ತಂಗಡಿ ತಾಳೆ ಬಾಳೆಗಾರರ ಸಂಘದ ಅಧ್ಯಕ್ಷ , ಶ್ರೀ ಭಾರತಿ ಎಣ್ಣೆ ತಾಳೆ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕ ಶ್ರೀ ಕೃಷ್ಣ ಭಟ್, 3ಎಫ್ ಆಯಿಲ್ ಪಾಮ್ ಕಂಪನಿಯ ಉಭಯ ಜಿಲ್ಲೆಗಳ ವ್ಯವಸ್ಥಾಪಕ ಕೃಷ್ಣ, ಪ್ರಗತಿಪರ ತಾಳೆ ಬಾಳೆಗಾರರ ಸುಂದರ್ ಶೆಟ್ಟಿ ಸುಲ್ಕೇರಿ, ಹೋಬಳಿ ತೋಟಗಾರಿಕಾ ಅಧಿಕಾರಿಗಳಾದ ಮಹಾವೀರ ಶೇಬಣ್ಣನವರ, ಮಂಜುನಾಥ್ ಬಿರಾದಾರ, ಭೀಮರಾಯ ಸೊಡ್ಡಗಿ, ಸಂಜೀವಿನಿ ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ವೀಣಾಶ್ರೀ, 3ಎಫ್ ಆಯಿಲ್ ಪಾಮ್ ಕಂಪನಿಯ ರಾಬರ್ಟ್ ಡಿಸೋಜ, ರೈತರು ಮತ್ತು ಕೃಷಿ ಸಖಿಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya
error: Content is protected !!