September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ ಸಖಿಯರಿಗೆ ಹಾಗೂ ಪ್ರಗತಿಪರ ರೈತರಿಗೆ ಎಣ್ಣೆ ತಾಳೆ ಬೆಳೆ ಬೇಸಾಯ ಹಾಗೂ ಇಲಾಖಾ ಯೋಜನೆಗಳ ಮಾಹಿತಿಯ ಮೆಗಾ ಡ್ರೈವ್ ಕಾರ್ಯಕ್ರಮ ಜೂ.19 ರಂದು ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ನಡೆಯಿತು.

ಅಡಿಕೆ ಹಳದಿ ರೋಗ, ದರ ಕುಸಿತ , ಹವಾಮಾನ ವೈಪರೀತ್ಯದಿಂದ ಕೃಷಿಕರು ಹೈರಾಣಾದ ಬಳಿಕ ಪರ್ಯಾಯ ಬೆಳೆಯಾಗಿ ಕಾಫಿ ಕಾಳುಮೆಣಸು ಇನ್ನಿತರ ಬೆಳೆಗಳಂತೆ ತಾಳೆ ಬೆಳೆ ಪರಿಚಯವಾಗಿದ್ದು ತಾಳೆ ಬೇಸಾಯಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇತ್ತಿಚೀನ ದಿನಗಳಲ್ಲಿ ತಾಳೆ ಎಣ್ಣೆ ಬೆಲೆ ಏರಿಕೆಯಾಗಿ ಬೆಳೆಗಾರರಿಗೆ ಲಾಭದಾಯಕವಾಗಿದೆ. ಇದೀಗ ಹೊಸ ತಳಿ ತಾಳೆ ಬೆಳೆಯಲ್ಲಿ ಪರಿಚಯಿಸಲಾಗಿದೆ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಎನ್.ಆರ್.ಎಲ್.ಎಮ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಬೆಳ್ತಂಗಡಿ ತಾಳೆ ಬಾಳೆಗಾರರ ಸಂಘದ ಅಧ್ಯಕ್ಷ , ಶ್ರೀ ಭಾರತಿ ಎಣ್ಣೆ ತಾಳೆ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕ ಶ್ರೀ ಕೃಷ್ಣ ಭಟ್, 3ಎಫ್ ಆಯಿಲ್ ಪಾಮ್ ಕಂಪನಿಯ ಉಭಯ ಜಿಲ್ಲೆಗಳ ವ್ಯವಸ್ಥಾಪಕ ಕೃಷ್ಣ, ಪ್ರಗತಿಪರ ತಾಳೆ ಬಾಳೆಗಾರರ ಸುಂದರ್ ಶೆಟ್ಟಿ ಸುಲ್ಕೇರಿ, ಹೋಬಳಿ ತೋಟಗಾರಿಕಾ ಅಧಿಕಾರಿಗಳಾದ ಮಹಾವೀರ ಶೇಬಣ್ಣನವರ, ಮಂಜುನಾಥ್ ಬಿರಾದಾರ, ಭೀಮರಾಯ ಸೊಡ್ಡಗಿ, ಸಂಜೀವಿನಿ ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ವೀಣಾಶ್ರೀ, 3ಎಫ್ ಆಯಿಲ್ ಪಾಮ್ ಕಂಪನಿಯ ರಾಬರ್ಟ್ ಡಿಸೋಜ, ರೈತರು ಮತ್ತು ಕೃಷಿ ಸಖಿಯರು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!