22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ ಸಖಿಯರಿಗೆ ಹಾಗೂ ಪ್ರಗತಿಪರ ರೈತರಿಗೆ ಎಣ್ಣೆ ತಾಳೆ ಬೆಳೆ ಬೇಸಾಯ ಹಾಗೂ ಇಲಾಖಾ ಯೋಜನೆಗಳ ಮಾಹಿತಿಯ ಮೆಗಾ ಡ್ರೈವ್ ಕಾರ್ಯಕ್ರಮ ಜೂ.19 ರಂದು ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ನಡೆಯಿತು.

ಅಡಿಕೆ ಹಳದಿ ರೋಗ, ದರ ಕುಸಿತ , ಹವಾಮಾನ ವೈಪರೀತ್ಯದಿಂದ ಕೃಷಿಕರು ಹೈರಾಣಾದ ಬಳಿಕ ಪರ್ಯಾಯ ಬೆಳೆಯಾಗಿ ಕಾಫಿ ಕಾಳುಮೆಣಸು ಇನ್ನಿತರ ಬೆಳೆಗಳಂತೆ ತಾಳೆ ಬೆಳೆ ಪರಿಚಯವಾಗಿದ್ದು ತಾಳೆ ಬೇಸಾಯಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇತ್ತಿಚೀನ ದಿನಗಳಲ್ಲಿ ತಾಳೆ ಎಣ್ಣೆ ಬೆಲೆ ಏರಿಕೆಯಾಗಿ ಬೆಳೆಗಾರರಿಗೆ ಲಾಭದಾಯಕವಾಗಿದೆ. ಇದೀಗ ಹೊಸ ತಳಿ ತಾಳೆ ಬೆಳೆಯಲ್ಲಿ ಪರಿಚಯಿಸಲಾಗಿದೆ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಎನ್.ಆರ್.ಎಲ್.ಎಮ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಬೆಳ್ತಂಗಡಿ ತಾಳೆ ಬಾಳೆಗಾರರ ಸಂಘದ ಅಧ್ಯಕ್ಷ , ಶ್ರೀ ಭಾರತಿ ಎಣ್ಣೆ ತಾಳೆ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕ ಶ್ರೀ ಕೃಷ್ಣ ಭಟ್, 3ಎಫ್ ಆಯಿಲ್ ಪಾಮ್ ಕಂಪನಿಯ ಉಭಯ ಜಿಲ್ಲೆಗಳ ವ್ಯವಸ್ಥಾಪಕ ಕೃಷ್ಣ, ಪ್ರಗತಿಪರ ತಾಳೆ ಬಾಳೆಗಾರರ ಸುಂದರ್ ಶೆಟ್ಟಿ ಸುಲ್ಕೇರಿ, ಹೋಬಳಿ ತೋಟಗಾರಿಕಾ ಅಧಿಕಾರಿಗಳಾದ ಮಹಾವೀರ ಶೇಬಣ್ಣನವರ, ಮಂಜುನಾಥ್ ಬಿರಾದಾರ, ಭೀಮರಾಯ ಸೊಡ್ಡಗಿ, ಸಂಜೀವಿನಿ ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ವೀಣಾಶ್ರೀ, 3ಎಫ್ ಆಯಿಲ್ ಪಾಮ್ ಕಂಪನಿಯ ರಾಬರ್ಟ್ ಡಿಸೋಜ, ರೈತರು ಮತ್ತು ಕೃಷಿ ಸಖಿಯರು ಭಾಗವಹಿಸಿದ್ದರು.

Related posts

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
error: Content is protected !!