25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ ಸಖಿಯರಿಗೆ ಹಾಗೂ ಪ್ರಗತಿಪರ ರೈತರಿಗೆ ಎಣ್ಣೆ ತಾಳೆ ಬೆಳೆ ಬೇಸಾಯ ಹಾಗೂ ಇಲಾಖಾ ಯೋಜನೆಗಳ ಮಾಹಿತಿಯ ಮೆಗಾ ಡ್ರೈವ್ ಕಾರ್ಯಕ್ರಮ ಜೂ.19 ರಂದು ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ನಡೆಯಿತು.

ಅಡಿಕೆ ಹಳದಿ ರೋಗ, ದರ ಕುಸಿತ , ಹವಾಮಾನ ವೈಪರೀತ್ಯದಿಂದ ಕೃಷಿಕರು ಹೈರಾಣಾದ ಬಳಿಕ ಪರ್ಯಾಯ ಬೆಳೆಯಾಗಿ ಕಾಫಿ ಕಾಳುಮೆಣಸು ಇನ್ನಿತರ ಬೆಳೆಗಳಂತೆ ತಾಳೆ ಬೆಳೆ ಪರಿಚಯವಾಗಿದ್ದು ತಾಳೆ ಬೇಸಾಯಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇತ್ತಿಚೀನ ದಿನಗಳಲ್ಲಿ ತಾಳೆ ಎಣ್ಣೆ ಬೆಲೆ ಏರಿಕೆಯಾಗಿ ಬೆಳೆಗಾರರಿಗೆ ಲಾಭದಾಯಕವಾಗಿದೆ. ಇದೀಗ ಹೊಸ ತಳಿ ತಾಳೆ ಬೆಳೆಯಲ್ಲಿ ಪರಿಚಯಿಸಲಾಗಿದೆ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಎನ್.ಆರ್.ಎಲ್.ಎಮ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಬೆಳ್ತಂಗಡಿ ತಾಳೆ ಬಾಳೆಗಾರರ ಸಂಘದ ಅಧ್ಯಕ್ಷ , ಶ್ರೀ ಭಾರತಿ ಎಣ್ಣೆ ತಾಳೆ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕ ಶ್ರೀ ಕೃಷ್ಣ ಭಟ್, 3ಎಫ್ ಆಯಿಲ್ ಪಾಮ್ ಕಂಪನಿಯ ಉಭಯ ಜಿಲ್ಲೆಗಳ ವ್ಯವಸ್ಥಾಪಕ ಕೃಷ್ಣ, ಪ್ರಗತಿಪರ ತಾಳೆ ಬಾಳೆಗಾರರ ಸುಂದರ್ ಶೆಟ್ಟಿ ಸುಲ್ಕೇರಿ, ಹೋಬಳಿ ತೋಟಗಾರಿಕಾ ಅಧಿಕಾರಿಗಳಾದ ಮಹಾವೀರ ಶೇಬಣ್ಣನವರ, ಮಂಜುನಾಥ್ ಬಿರಾದಾರ, ಭೀಮರಾಯ ಸೊಡ್ಡಗಿ, ಸಂಜೀವಿನಿ ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ವೀಣಾಶ್ರೀ, 3ಎಫ್ ಆಯಿಲ್ ಪಾಮ್ ಕಂಪನಿಯ ರಾಬರ್ಟ್ ಡಿಸೋಜ, ರೈತರು ಮತ್ತು ಕೃಷಿ ಸಖಿಯರು ಭಾಗವಹಿಸಿದ್ದರು.

Related posts

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!