23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಹೊಸ್ಮಾರ್ ಶಾಖೆಯ ಸಾಲಗಾರರಾದ ಗುರುಮೂರ್ತಿ ಇವರು ಅಕಾಲಿಕ ಮರಣ ಹೊಂದಿರುತ್ತಾರೆ. ಸಂಘದ ವಿಶೇಷ ಯೋಜನೆಯಾದ ಶ್ರೀ ಗುರು ಸಾಲಗಾರರ ಮರಣ ನಿಧಿಯಿಂದ ಮರಣ ಹೊಂದಿದ ಸಾಲಗಾರರ ಸಾಲಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಇವರಿಗೆ ನೀಡಲಾದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಮಂಜೂರಾತಿ ಮೇರೆಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸಿ. ಇವರ ಕುಟುಂಬದವರಿಗೆ ಸಾಲದಿಂದ ಋಣ ಮುಕ್ತಾಯಗೊಳಿಸಿದ ಖಾತ್ರಿ ಪತ್ರವನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ.ರಾಜಾರಾಮ ಕೆ.ಬಿ, ಜಯವಿಕ್ರಮ್ ಪಿ, ಪುರುಷರಕಟ್ಟೆ ಪ್ರಭಾರ ಶಾಖಾ ವ್ಯವಸ್ಥಾಪಕ ಪವನ್ ಕೆ ಉಪಸ್ಥಿತರಿದ್ದರು.


ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಈಗಾಗಲೇ ಈ ಯೋಜನೆಯ ಅನ್ವಯ 83 ಕುಟುಂಬಗಳಿಗೆ ರೂ.61,58,593/- ಮೊತ್ತದ ಸಾಲಗಾರರ ಮರಣ ನಿಧಿಯನ್ನು ನೀಡಿ ಅವಲಂಬಿತ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿ ಸದ್ರಿ ಕುಟುಂಬಗಳನ್ನು ಋಣ ಮುಕ್ತಗೊಳಿಸಿ ಸಹಕಾರ ಕ್ಷೇತ್ರದಲ್ಲಿ ಅದ್ವೀತಿಯ ಸಾಧನೆಯನ್ನು ಮಾಡುತ್ತಿದೆ.

Related posts

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya
error: Content is protected !!