September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಮಾಲಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಮಾಲಾಡಿ ಸಹಕಾರದೊಂದಿಗೆ ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ವಲಯದ ಮೇಲ್ವಿಚಾರಕರು ಶ್ರೀಮತಿ ಹೇಮಾವತಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳೆಸಬೇಕು, ಅವಕಾಶ ಇರುವ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಹಣ್ಣಿನ ಗಿಡಗಳನ್ನು ನಾಟಿ ಮಾಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿಆಹಾರ ಸಿಗುವಂತೆ ಮಾಡಬೇಕು ಎಂದು ತಿಳಿಸಿದರು.

ಶಾಲಾ ಅಭಿವೃದ್ಧಿ ಅಧ್ಯಕ್ಷ ಹಕೀಮ್ ಮಾತನಾಡಿ ನಾವೆಲ್ಲರೂ ಸೇರಿ ಗಿಡಗಳನ್ನು ನೆಟ್ಟು ಪರಿಸರದ ಮೌಲ್ಯವನ್ನು ಹೆಚ್ಚಿಸೋಣ, ಗಿಡ ಮರಗಳನ್ನು ನಾವು ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು. ಪರಿಸರ ಇದ್ದರೆ ನಾವು , ಇದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಪ್ರತಿಯೊಬ್ಬರು ತಮ್ಮ ಹುಟ್ಟುಹಬ್ಬದ ದಿನ ಗಿಡ ನಾಟಿ ಮಾಡಿ ಆಚರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಲತಾ ಕೆ, ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್ , ಸೇವಾಪ್ರತಿನಿಧಿ ಲಾನ್ಸಿ ಶಾಲಾ ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು, ನಂತರ ಶಾಲಾ ಆವರಣದಲ್ಲಿ ಯಶಸ್ವಿಯಾಗಿ ಗಿಡ ನಾಟಿ ಮಾಡಲಾಯಿತು.

Related posts

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya
error: Content is protected !!