37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ಅವರ ಕವನ ಸಂಕಲನ ದರ್ಪಣ ಬಿಡುಗಡೆ ಕಾರ್ಯಕ್ರಮ ಮುಂಡಾಜೆ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜೂ. 19 ನಡೆಯಿತು.

ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್
ಕಳೆದ ಮೂರು ವರ್ಷಗಳಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ನೂರಕ್ಕಿಂತ ಅಧಿಕ ಪುಸ್ತಕಗಳನ್ನು ಬಿಡುಗಡೆಗೊಳಿಸುವ ಮೂಲಕ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿರುವ ಜತೆ ಅನೇಕ ಎಲೆಮರೆಯ ಕಾಯಿಗಳನ್ನು ಗುರುತಿಸಲಾಗಿದೆ. ವಿದ್ಯಾರ್ಥಿಗಳಿರುವಲ್ಲಿ ಸಾಹಿತ್ಯ ಪರಿಷತ್ತು ಹೋಗುವ ಧ್ಯೇಯ ಹೊಂದಿದ್ದು ವಿದ್ಯಾರ್ಥಿಗಳಿಗೆ ಸಾಹಿತ್ಯ ಅಭಿರುಚಿ ಮೂಡಿಸುವ ಯತ್ನ ನಡೆದಿದೆ.ಎಲ್ಲಾ ರಂಗಗಳಲ್ಲೂ ಹಿರಿಯರ ಅನುಭವ,ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಅಗತ್ಯ ಎಂದರು.

ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ ಮಾತನಾಡಿ ಸಾಹಿತ್ಯ ಸಮಾಜಕ್ಕೆ ಮಾರ್ಗದರ್ಶನ ನೀಡುವುದಲ್ಲದೆ ನೆಮ್ಮದಿ,ಆಧುನಿಕತೆಗೆ ಕಾರಣವಾಗಿದೆ.
ಮುಂಡಾಜೆ ಅನೇಕ ಕಲಾವಿದರ ತವರೂರು.ಇಲ್ಲಿಯೂ 3ಬಾರಿ ಸಾಹಿತ್ಯ ಸಮ್ಮೇಳನ ನಡೆದಿರುವುದು ಹೆಮ್ಮೆಯ ವಿಚಾರ.
ತಾಲೂಕು ಘಟಕದ ಅಧ್ಯಕ್ಷ ಯದುಪತಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಹಿತ್ಯ ಬದುಕಿಗೆ,ಮಾನಸಿಕ ಸಂತಸಕ್ಕೆ ಮುಖ್ಯ.ಪುಸ್ತಕಗಳು ಸಮಾಜದ ಪ್ರತಿಬಿಂಬ ಎಂದರು.


ಎಸ್ ಡಿಎಂ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ದಿವಾ ಕೊಕ್ಕಡ,ಮುಂಡಾಜೆ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಉಪಸ್ಥಿತರಿದ್ದರು.
ಕವಯತ್ರಿ ಪದ್ಮಾ ಪಿ. ಬೇಡಕರ್ ಅವರನ್ನು ಗೌರವಿಸಲಾಯಿತು. ಉಪನ್ಯಾಸಕಿ ಸ್ಮಿತಾ ಬೇಡೇಕರ್ ಕಾರ್ಯಕ್ರಮ ನಿರೂಪಿಸಿದರು.
ಶಿವಾನಿ ಸ್ವಾಗತಿಸಿದರು. ಶರ್ವಾಣಿ ವಂದಿಸಿದರು.

Related posts

ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!