ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ.19 ರಂದು ನಡೆಯಿತು.

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಚುನಾವಣಾ ಅಧಿಸೂಚನೆಯಿಂದ ಹಿಡಿದು ಪ್ರಮಾಣ ಪತ್ರ ನೀಡುವಲ್ಲಿ ತನಕ ಮತ್ತು ಮತಯಂತ್ರದ (ಇ.ವಿ.ಯಂ.) ಮೂಲಕ ಮತದಾನ ನಡೆಯಿತು.

ಮುಖ್ಯ ಶಿಕ್ಷಕ ಜಯರಾಮ ಮಯ್ಯ, ಚುನಾವಣಾಧಿಕಾರಿ ಶಿಕ್ಷಕ ಕಿರಣ್ ಹಾಗೂ ಇತರ ಶಿಕ್ಷಕ ವರ್ಗದ ಸಹಯೋಗದೊಂದಿಗೆ ಚುನಾವಣ ಪ್ರಕ್ರಿಯೆ ನಡೆಯಿತು.

ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಮೋಹನ್ ಕೃಷ್ಣ, ಉಪನಾಯಕಿಯಾಗಿ 9ನೇ ತರಗತಿಯ ನೇತ್ರಾವತಿ, ಕಾರ್ಯದರ್ಶಿಯಾಗಿ 10ನೇ ತರಗತಿಯ ಮನೀಷ್ ಚುನಾಯಿತರಾದರು.

ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಮಾಣಪತ್ರ ನೀಡಿ ಅಭಿನಂದಿಸಲಾಯಿತು.

ಇಡೀ ಚುನಾವಣಾ ಪ್ರಕ್ರಿಯೆಯ ಅರಿವನ್ನು ಪಡೆದ ವಿದ್ಯಾರ್ಥಿಗಳು ಉತ್ಸಾಹದಿಂದ ಮತ ಚಲಾಯಿಸಿದ್ದಕ್ಕಾಗಿ ಅವರಿಗೆ ಪೆನ್ನನ್ನು ಉಡುಗೊರೆಯಾಗಿ ನೀಡಲಾಯಿತು .

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

Suddi Udaya

ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ ಶಾಸಕ ಹರೀಶ್ ಪೂಂಜ ಖಂಡನೆ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya
error: Content is protected !!