23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು: ಗುತ್ತಿನಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಸವಣಾಲು ಗುತ್ತಿನಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.20 ರಂದು ನಡೆಯಿತು.ಬೆಳ್ತಂಗಡಿಯ ನೋಟರಿ ವಕೀಲ ಮುರಳಿ ಬಿ.‌ಮತ್ತು ಅವರ ಪುತ್ರರಾದ ಮಂದಾರ ಹಾಗೂ ಮಯೂರ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೇರವೇರಿತು.

ಅವರು ಸರ್ಕಾರಿ ಶಾಲೆಯ ಸಬಲೀಕರಣಕ್ಕಾಗಿ ಹಲವಾರು ವರ್ಷಗಳಿಂದ ಗುತ್ತಿನಬೈಲು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡುತ್ತಾ ಬಂದಿದ್ದಾರೆ. ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಪ್ರಭಾಕರ್ ಭಟ್, ಮೇಲಂತಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸ್ಪೋಕನ್ ಇಂಗ್ಲೀಷ್ ತರಗತಿ ತರಬೇತಿಗಾರ ವಿವೇಕ್ ಶೆಟ್ಟಿ, ಹಾಜರಿದ್ದರು. ಸಹ ಶಿಕ್ಷಕರಾದ ನಮಿತಾ ಆರ್ ಪ್ರಸ್ತಾವಿಸಿ, ಸ್ವಾಗತಿಸಿ, ಶ್ಯಾಮಲ ಕೆ. ವಂದಿಸಿ, ವಸಂತ ಗುಡಿಗಾರ್ ನಿರೂಪಿಸಿದರು.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಜು. 15 ಸೋಮವಾರ ದ. ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

Suddi Udaya
error: Content is protected !!