July 23, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು: ಗುತ್ತಿನಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಸವಣಾಲು ಗುತ್ತಿನಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.20 ರಂದು ನಡೆಯಿತು.ಬೆಳ್ತಂಗಡಿಯ ನೋಟರಿ ವಕೀಲ ಮುರಳಿ ಬಿ.‌ಮತ್ತು ಅವರ ಪುತ್ರರಾದ ಮಂದಾರ ಹಾಗೂ ಮಯೂರ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೇರವೇರಿತು.

ಅವರು ಸರ್ಕಾರಿ ಶಾಲೆಯ ಸಬಲೀಕರಣಕ್ಕಾಗಿ ಹಲವಾರು ವರ್ಷಗಳಿಂದ ಗುತ್ತಿನಬೈಲು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡುತ್ತಾ ಬಂದಿದ್ದಾರೆ. ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಪ್ರಭಾಕರ್ ಭಟ್, ಮೇಲಂತಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸ್ಪೋಕನ್ ಇಂಗ್ಲೀಷ್ ತರಗತಿ ತರಬೇತಿಗಾರ ವಿವೇಕ್ ಶೆಟ್ಟಿ, ಹಾಜರಿದ್ದರು. ಸಹ ಶಿಕ್ಷಕರಾದ ನಮಿತಾ ಆರ್ ಪ್ರಸ್ತಾವಿಸಿ, ಸ್ವಾಗತಿಸಿ, ಶ್ಯಾಮಲ ಕೆ. ವಂದಿಸಿ, ವಸಂತ ಗುಡಿಗಾರ್ ನಿರೂಪಿಸಿದರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya
error: Content is protected !!