September 6, 2026
ಗ್ರಾಮಾಂತರ ಸುದ್ದಿ

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸವಣಾಲು : ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು . ಇಲ್ಲಿನ ಹಳೆಯ ವಿದ್ಯಾರ್ಥಿ ಹಾಗೂ ಬಲಿಪ ರೆಸಾರ್ಟಿನ ಮಾಲಕರು ,ವಕೀಲರು ಮತ್ತು 2025-26 ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನ ನಿಯೋಜಿತ ಅಧ್ಯಕ್ಷರು ಆಗಿರುವ ಶ್ರೀಯುತ ಮುರಳಿ ಬಲಿಪ ಇವರು ಸುಮಾರು 13 ವರ್ಷದಿಂದ ಪ್ರತಿ ವರ್ಷವೂ ನಮ್ಮ ವಿದ್ಯಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಬರೆಯುವ ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಿದ್ದಾರೆ.ಈ.ಕಾರ್ಯಕ್ರಮವು ನಮ್ಮ ಶಾಲೆಯಲ್ಲಿ ಜೂ. 20ರಂದು ನೆರವೇರಿತು.


ಅಧ್ಯಕ್ಷತೆಯನ್ನು ಶ್ರೀ ದಾಮೋದರ ಬಂಗೇರ ಶಾಲಾಡಳಿತ ಸಮಿತಿಯ ಉಪಾಧ್ಯಕ್ಷರು ವಹಿಸಿದ್ದರು.ಅತಿಥಿಗಳಾಗಿ ಶಾಲಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ದಯಾನಂದ ರೈ,ಕಾರ್ಯದರ್ಶಿ
ಶ್ರೀ ಕೂಸಪ್ಪ ಗೌಡ,,ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಗಣೇಶ್ ಭಂಡಾರಿ, ಆಡಳಿತ ಸಮಿತಿಯ ಪದಾಧಿಕಾರಿಗಳಾದ ಶ್ರೀ ವಿವೇಕ್ ಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀ ಲೋಕನಾಥ ಶೆಟ್ಟಿ, ಸೇವಾ ಕರ್ತರಾದ ಶ್ರೀ ಮುರಳಿ ಇವರ ಪುತ್ರರಾದ ಶ್ರೀ ಮಯೂರ, ಶ್ರೀ ಮಂದಾರ, ತಾಯಂದಿರ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಮತಿ ಪ್ರೇಮಾ,, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಜಿ ಮಂಜುನಾಥ ಜಿ, ಶಾಲಾ ಶಿಕ್ಷಕಿಯರಾದ ಶ್ರೀಮತಿ ಮಮತಾ, ಶ್ರೀಮತಿ ಸೌಮ್ಯ, ಕು|ಶುಭ, ಕು| ಸುಷ್ಮಾ, ಕು| ವೈಶಾಲಿ,ಶಾಲಾ ವಿದ್ಯಾರ್ಥಿ ನಾಯಕ ಧನ್ ರಾಜ್ ಹೆಗ್ಡೆ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯೋಪಾಧ್ಯಾಯರು ಸ್ವಾಗತಿಸಿದರು, ಶ್ರೀಮತಿ ಸೌಮ್ಯ ಧನ್ಯವಾದ ಸಮರ್ಪಿಸಿದರು,ಕು| ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು

Related posts

ಭಾರೀ ಮಳೆ: ನಾಳೆ(ಜು.2) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!