25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ  “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತರಬೇತುದಾರ  ಶ್ರೀಕಾಂತ್ ಪೂಜಾರಿರವರು ಹಾಗೂ ಜೀವನ ಕೌಶಲ್ಯ ತರಬೇತುದಾರರು ಮತ್ತು ಎಸ್ ಡಿ ಎಂ  ಕಾಲೇಜು  ಉಜಿರೆ ಇಲ್ಲಿನ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ  ಮಹೇಶ್ ಕುಮಾರ್ ಶೆಟ್ಟಿ, ಇವರು  ಜೀವನ ನಿರ್ವಹಣೆ, ಸವಾಲುಗಳನ್ನು ಎದುರಿಸುವ ಕುರಿತು ತರಬೇತಿ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ರವರು ” ಒಬ್ಬ ವ್ಯಕ್ತಿಯಲ್ಲಿ ಜೀವನ ಕೌಶಲ್ಯ  ಬಹಳ ಅವಶ್ಯಕ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಸವಾಲುಗಳನ್ನು ಎದುರಿಸಿ ಬದುಕುವ ಕೌಶಲ್ಯ ಪಡೆದುಕೊಳ್ಳಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್ ಉಪಸ್ಥಿತರಿದ್ದರು.

 ಸ್ವಯಂ ಸೇವಕಿ ಸುಪೇಕ್ಷಾ ನಿರೂಪಿಸಿ, ಸ್ವಯಂ ಸೇವಕ ವಿನೋದ್ ಸ್ವಾಗತಿಸಿ, ಸ್ವಯಂ ಸೇವಕಿ ದೀಪ್ತಿ ವಂದಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya
error: Content is protected !!