September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ  “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತರಬೇತುದಾರ  ಶ್ರೀಕಾಂತ್ ಪೂಜಾರಿರವರು ಹಾಗೂ ಜೀವನ ಕೌಶಲ್ಯ ತರಬೇತುದಾರರು ಮತ್ತು ಎಸ್ ಡಿ ಎಂ  ಕಾಲೇಜು  ಉಜಿರೆ ಇಲ್ಲಿನ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ  ಮಹೇಶ್ ಕುಮಾರ್ ಶೆಟ್ಟಿ, ಇವರು  ಜೀವನ ನಿರ್ವಹಣೆ, ಸವಾಲುಗಳನ್ನು ಎದುರಿಸುವ ಕುರಿತು ತರಬೇತಿ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ರವರು ” ಒಬ್ಬ ವ್ಯಕ್ತಿಯಲ್ಲಿ ಜೀವನ ಕೌಶಲ್ಯ  ಬಹಳ ಅವಶ್ಯಕ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಸವಾಲುಗಳನ್ನು ಎದುರಿಸಿ ಬದುಕುವ ಕೌಶಲ್ಯ ಪಡೆದುಕೊಳ್ಳಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್ ಉಪಸ್ಥಿತರಿದ್ದರು.

 ಸ್ವಯಂ ಸೇವಕಿ ಸುಪೇಕ್ಷಾ ನಿರೂಪಿಸಿ, ಸ್ವಯಂ ಸೇವಕ ವಿನೋದ್ ಸ್ವಾಗತಿಸಿ, ಸ್ವಯಂ ಸೇವಕಿ ದೀಪ್ತಿ ವಂದಿಸಿದರು.

Related posts

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಸಿ.ಎ. ಗ್ರೂಪ್ಸ್ ಹೆಲ್ಪಿಂಗ್ ಹ್ಯಾಂಡ್ ವತಿಯಿಂದ ಕೊಲ್ಪಾಡಿ ಶಾಲಾ ಮಕ್ಕಳಿಗೆ ಕೊಡುಗೆಗಳ ಹಸ್ತಾಂತರ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya
error: Content is protected !!