September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜು, ಉಜಿರೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು “ಪಯಣ” ವಿಂಟೇಜ್ ಕಾರುಗಳ ಸಂಗ್ರಹಾಲಯ, ಮೈಸೂರು- ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂ.21 ರಂದು ಶನಿವಾರ ಬೆಳಿಗ್ಯೆ ಏಳು ಗಂಟೆಯಿಂದ ಮೈಸೂರಿನಲ್ಲಿ “ಪಯಣ” ಆವರಣದಲ್ಲಿರುವ ಸಭಾಭವನದಲ್ಲಿ ಹನ್ನೊಂದನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದೆ ಎಂದು ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಮತ್ತು ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ತಿಳಿಸಿದ್ದಾರೆ.


ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಸಮಾರಂಭವನ್ನು ಉದ್ಘಾಟಿಸುವರು.


ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಬಂಡಿಸಿದ್ದೇಗೌಡ ಮತ್ತು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಾಶಂಸನೆ ಮಾಡುವರು.


ಮೈಸೂರಿನಲ್ಲಿ ವಿವಿಧ ಕೇಂದ್ರಗಳಲ್ಲಿ ಈಗಾಗಲೆ ಸಾರ್ವಜನಿಕರಿಗೆ ಯೋಗ ತರಬೇತಿ ಶಿಬಿರ ನಡೆಸಿದ್ದು, ಇಲ್ಲಿ ತರಬೇತಿ ಪಡೆದ 3500 ಮಂದಿ “ಪಯಣ”ದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಲ್ಲಿ ಭಾಗವಹಿಸುವರು.


ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಆಶ್ರಯದಲ್ಲಿ ನಡೆಸಲ್ಪಡುವ ಎಲ್ಲಾ 54 ಶಿಕ್ಷಣ ಸಂಸ್ಥೆಗಳಲ್ಲಿ ಕೂಡಾ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!