23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಬಾರ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಪೆರಿಯಟ್ಟು ಇವರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಗುಣಾಕಾರ ಅಗ್ನಾಡಿ ರವರು ದೀಪವನ್ನು ಪ್ರಜ್ವಲಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾದ್ಯಾಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯ ಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿ ಗಳಿಗೆ ಅನುಕೊಲ್ ವಾಗುತ್ತದೆ ಅದನ್ನ ನಾವು ರಕ್ಷಿಸಿ ಕೊಳಬೇಕು ಎಂದು ಮಾಹಿತಿ ನೀಡಿದರು.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್.ಡಿ.,ಎಮ್.ಸಿ ಅಧ್ಯಕ್ಷ ಜನಾರ್ಧನ್ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿದರು. ಕಾರ್ಯಕ್ರಮ ಅಧ್ಯಕ್ಷ ಮೋಹನ್ ಗೌಡ ಮಾತನಾಡಿ ಪರಿಸರ ನಾಶ ದಿಂದ ಮನುಕುಲಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ವಿಶ್ವನಾಥ್, ಕೃಷಿ ಮೇಲ್ವಿಚಾರಕರು ಕೃಷ್ಣ, ಒಕ್ಕೂಟದ ಉಪಾಧ್ಯಕ್ಷ ಯೋಗೀಶ್ ಶಾಲೆ ಮುಖ್ಯೋಪಾಧ್ಯಾಯರು ಹೇಮಾವತಿ, ಸೇವಾಪ್ರತಿನಿಧಿ ವಿಶಾಲಾಕ್ಷಿ ಹಾಗೂ ಶಾಲಾ ಶಿಕ್ಷಕ ವೃಂದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya
error: Content is protected !!