22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಬಾರ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಪೆರಿಯಟ್ಟು ಇವರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಗುಣಾಕಾರ ಅಗ್ನಾಡಿ ರವರು ದೀಪವನ್ನು ಪ್ರಜ್ವಲಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾದ್ಯಾಂತ ಪರಿಸರ ಜಾಗೃತಿ ಹಾಗೂ ಸಾಮಾಜಿಕ ಅರಣ್ಯ ಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿ ಗಳಿಗೆ ಅನುಕೊಲ್ ವಾಗುತ್ತದೆ ಅದನ್ನ ನಾವು ರಕ್ಷಿಸಿ ಕೊಳಬೇಕು ಎಂದು ಮಾಹಿತಿ ನೀಡಿದರು.

ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ ಎಸ್.ಡಿ.,ಎಮ್.ಸಿ ಅಧ್ಯಕ್ಷ ಜನಾರ್ಧನ್ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿದರು. ಕಾರ್ಯಕ್ರಮ ಅಧ್ಯಕ್ಷ ಮೋಹನ್ ಗೌಡ ಮಾತನಾಡಿ ಪರಿಸರ ನಾಶ ದಿಂದ ಮನುಕುಲಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ವಿಶ್ವನಾಥ್, ಕೃಷಿ ಮೇಲ್ವಿಚಾರಕರು ಕೃಷ್ಣ, ಒಕ್ಕೂಟದ ಉಪಾಧ್ಯಕ್ಷ ಯೋಗೀಶ್ ಶಾಲೆ ಮುಖ್ಯೋಪಾಧ್ಯಾಯರು ಹೇಮಾವತಿ, ಸೇವಾಪ್ರತಿನಿಧಿ ವಿಶಾಲಾಕ್ಷಿ ಹಾಗೂ ಶಾಲಾ ಶಿಕ್ಷಕ ವೃಂದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya
error: Content is protected !!