23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ.19 ರಂದು ನಡೆಯಿತು.

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಚುನಾವಣಾ ಅಧಿಸೂಚನೆಯಿಂದ ಹಿಡಿದು ಪ್ರಮಾಣ ಪತ್ರ ನೀಡುವಲ್ಲಿ ತನಕ ಮತ್ತು ಮತಯಂತ್ರದ (ಇ.ವಿ.ಯಂ.) ಮೂಲಕ ಮತದಾನ ನಡೆಯಿತು.

ಮುಖ್ಯ ಶಿಕ್ಷಕ ಜಯರಾಮ ಮಯ್ಯ, ಚುನಾವಣಾಧಿಕಾರಿ ಶಿಕ್ಷಕ ಕಿರಣ್ ಹಾಗೂ ಇತರ ಶಿಕ್ಷಕ ವರ್ಗದ ಸಹಯೋಗದೊಂದಿಗೆ ಚುನಾವಣ ಪ್ರಕ್ರಿಯೆ ನಡೆಯಿತು.

ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಮೋಹನ್ ಕೃಷ್ಣ, ಉಪನಾಯಕಿಯಾಗಿ 9ನೇ ತರಗತಿಯ ನೇತ್ರಾವತಿ, ಕಾರ್ಯದರ್ಶಿಯಾಗಿ 10ನೇ ತರಗತಿಯ ಮನೀಷ್ ಚುನಾಯಿತರಾದರು.

ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಮಾಣಪತ್ರ ನೀಡಿ ಅಭಿನಂದಿಸಲಾಯಿತು.

ಇಡೀ ಚುನಾವಣಾ ಪ್ರಕ್ರಿಯೆಯ ಅರಿವನ್ನು ಪಡೆದ ವಿದ್ಯಾರ್ಥಿಗಳು ಉತ್ಸಾಹದಿಂದ ಮತ ಚಲಾಯಿಸಿದ್ದಕ್ಕಾಗಿ ಅವರಿಗೆ ಪೆನ್ನನ್ನು ಉಡುಗೊರೆಯಾಗಿ ನೀಡಲಾಯಿತು .

Related posts

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya
error: Content is protected !!