ಬೆಳ್ತಂಗಡಿ: ಸವಣಾಲು ಗುತ್ತಿನಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.20 ರಂದು ನಡೆಯಿತು.ಬೆಳ್ತಂಗಡಿಯ ನೋಟರಿ ವಕೀಲ ಮುರಳಿ ಬಿ.ಮತ್ತು ಅವರ ಪುತ್ರರಾದ ಮಂದಾರ ಹಾಗೂ ಮಯೂರ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೇರವೇರಿತು.
ಅವರು ಸರ್ಕಾರಿ ಶಾಲೆಯ ಸಬಲೀಕರಣಕ್ಕಾಗಿ ಹಲವಾರು ವರ್ಷಗಳಿಂದ ಗುತ್ತಿನಬೈಲು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡುತ್ತಾ ಬಂದಿದ್ದಾರೆ. ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಪ್ರಭಾಕರ್ ಭಟ್, ಮೇಲಂತಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸ್ಪೋಕನ್ ಇಂಗ್ಲೀಷ್ ತರಗತಿ ತರಬೇತಿಗಾರ ವಿವೇಕ್ ಶೆಟ್ಟಿ, ಹಾಜರಿದ್ದರು. ಸಹ ಶಿಕ್ಷಕರಾದ ನಮಿತಾ ಆರ್ ಪ್ರಸ್ತಾವಿಸಿ, ಸ್ವಾಗತಿಸಿ, ಶ್ಯಾಮಲ ಕೆ. ವಂದಿಸಿ, ವಸಂತ ಗುಡಿಗಾರ್ ನಿರೂಪಿಸಿದರು.











