22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

ಸುಲ್ಕೇರಿ: ಹಿಂದೂ ಧರ್ಮ, ಸಂಸ್ಕೃತಿಯನ್ನು ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ. ಅಂತಹ ಕಾರ್ಯವನ್ನು ಶ್ರೀರಾಮ ಶಾಲೆ ಮಾಡುತ್ತಿದೆ. ಪೋಷಕರು, ಗ್ರಾಮಸ್ಥರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.          

ಸುಲ್ಕೇರಿಯ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ  ಶ್ರೀರಾಮ ಪ್ರೌಢ ಶಾಲೆಯಲ್ಲಿ ಜೂ 19 ರಂದು  ನಡೆದ ಪ್ರವೇಶೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ವೇಳೆ ಶಿವಪ್ರಸಾದ್ ಅಜಿಲರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.


  ವೇದಿಕೆಯಲ್ಲಿ ಅಳದಂಗಡಿ ಸತ್ಯದೇವತೆ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ, ಕಾರ್ಕಳ ಕಮಲಾಕ್ಷ ಕಾಮತ್, ಕೆ.ಎಸ್.ಹೆಗ್ಡೆ ವೈದ್ಯಕೀಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ| ಶ್ರೀಪಾದ ಜಿ. ಮೆಹೆಂದಳೆ, ನಾರಾವಿ ಸಿ.ಎ.ಬ್ಯಾಂಕಿನ ಅಧ್ಯಕ್ಷ ಸುಧಾಕರ ಭಂಡಾರಿ, ಶಿರ್ಲಾಲು ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಧೀರ್ ಸುವರ್ಣ, ಶಾಲಾ ಆಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ನಾರಾವಿ, ಅಧ್ಯಕ್ಷ ರಾಜು ಪೂಜಾರಿ ,ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಮೇಶ್ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಮೋದ್ ಕುಮಾರ್ ಸ್ವಾಗತಿಸಿ,  ಶಿಕ್ಷಕಿ ಶಶಿಕಲಾ ವಂದಿಸಿದರು. ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya
error: Content is protected !!