23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸವಣಾಲು : ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು . ಇಲ್ಲಿನ ಹಳೆಯ ವಿದ್ಯಾರ್ಥಿ ಹಾಗೂ ಬಲಿಪ ರೆಸಾರ್ಟಿನ ಮಾಲಕರು ,ವಕೀಲರು ಮತ್ತು 2025-26 ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನ ನಿಯೋಜಿತ ಅಧ್ಯಕ್ಷರು ಆಗಿರುವ ಶ್ರೀಯುತ ಮುರಳಿ ಬಲಿಪ ಇವರು ಸುಮಾರು 13 ವರ್ಷದಿಂದ ಪ್ರತಿ ವರ್ಷವೂ ನಮ್ಮ ವಿದ್ಯಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಬರೆಯುವ ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಿದ್ದಾರೆ.ಈ.ಕಾರ್ಯಕ್ರಮವು ನಮ್ಮ ಶಾಲೆಯಲ್ಲಿ ಜೂ. 20ರಂದು ನೆರವೇರಿತು.


ಅಧ್ಯಕ್ಷತೆಯನ್ನು ಶ್ರೀ ದಾಮೋದರ ಬಂಗೇರ ಶಾಲಾಡಳಿತ ಸಮಿತಿಯ ಉಪಾಧ್ಯಕ್ಷರು ವಹಿಸಿದ್ದರು.ಅತಿಥಿಗಳಾಗಿ ಶಾಲಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ದಯಾನಂದ ರೈ,ಕಾರ್ಯದರ್ಶಿ
ಶ್ರೀ ಕೂಸಪ್ಪ ಗೌಡ,,ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಗಣೇಶ್ ಭಂಡಾರಿ, ಆಡಳಿತ ಸಮಿತಿಯ ಪದಾಧಿಕಾರಿಗಳಾದ ಶ್ರೀ ವಿವೇಕ್ ಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀ ಲೋಕನಾಥ ಶೆಟ್ಟಿ, ಸೇವಾ ಕರ್ತರಾದ ಶ್ರೀ ಮುರಳಿ ಇವರ ಪುತ್ರರಾದ ಶ್ರೀ ಮಯೂರ, ಶ್ರೀ ಮಂದಾರ, ತಾಯಂದಿರ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಮತಿ ಪ್ರೇಮಾ,, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಜಿ ಮಂಜುನಾಥ ಜಿ, ಶಾಲಾ ಶಿಕ್ಷಕಿಯರಾದ ಶ್ರೀಮತಿ ಮಮತಾ, ಶ್ರೀಮತಿ ಸೌಮ್ಯ, ಕು|ಶುಭ, ಕು| ಸುಷ್ಮಾ, ಕು| ವೈಶಾಲಿ,ಶಾಲಾ ವಿದ್ಯಾರ್ಥಿ ನಾಯಕ ಧನ್ ರಾಜ್ ಹೆಗ್ಡೆ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯೋಪಾಧ್ಯಾಯರು ಸ್ವಾಗತಿಸಿದರು, ಶ್ರೀಮತಿ ಸೌಮ್ಯ ಧನ್ಯವಾದ ಸಮರ್ಪಿಸಿದರು,ಕು| ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು

Related posts

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya
error: Content is protected !!