22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸವಣಾಲು : ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು . ಇಲ್ಲಿನ ಹಳೆಯ ವಿದ್ಯಾರ್ಥಿ ಹಾಗೂ ಬಲಿಪ ರೆಸಾರ್ಟಿನ ಮಾಲಕರು ,ವಕೀಲರು ಮತ್ತು 2025-26 ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನ ನಿಯೋಜಿತ ಅಧ್ಯಕ್ಷರು ಆಗಿರುವ ಶ್ರೀಯುತ ಮುರಳಿ ಬಲಿಪ ಇವರು ಸುಮಾರು 13 ವರ್ಷದಿಂದ ಪ್ರತಿ ವರ್ಷವೂ ನಮ್ಮ ವಿದ್ಯಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಬರೆಯುವ ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಿದ್ದಾರೆ.ಈ.ಕಾರ್ಯಕ್ರಮವು ನಮ್ಮ ಶಾಲೆಯಲ್ಲಿ ಜೂ. 20ರಂದು ನೆರವೇರಿತು.


ಅಧ್ಯಕ್ಷತೆಯನ್ನು ಶ್ರೀ ದಾಮೋದರ ಬಂಗೇರ ಶಾಲಾಡಳಿತ ಸಮಿತಿಯ ಉಪಾಧ್ಯಕ್ಷರು ವಹಿಸಿದ್ದರು.ಅತಿಥಿಗಳಾಗಿ ಶಾಲಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ದಯಾನಂದ ರೈ,ಕಾರ್ಯದರ್ಶಿ
ಶ್ರೀ ಕೂಸಪ್ಪ ಗೌಡ,,ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಗಣೇಶ್ ಭಂಡಾರಿ, ಆಡಳಿತ ಸಮಿತಿಯ ಪದಾಧಿಕಾರಿಗಳಾದ ಶ್ರೀ ವಿವೇಕ್ ಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀ ಲೋಕನಾಥ ಶೆಟ್ಟಿ, ಸೇವಾ ಕರ್ತರಾದ ಶ್ರೀ ಮುರಳಿ ಇವರ ಪುತ್ರರಾದ ಶ್ರೀ ಮಯೂರ, ಶ್ರೀ ಮಂದಾರ, ತಾಯಂದಿರ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಮತಿ ಪ್ರೇಮಾ,, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಜಿ ಮಂಜುನಾಥ ಜಿ, ಶಾಲಾ ಶಿಕ್ಷಕಿಯರಾದ ಶ್ರೀಮತಿ ಮಮತಾ, ಶ್ರೀಮತಿ ಸೌಮ್ಯ, ಕು|ಶುಭ, ಕು| ಸುಷ್ಮಾ, ಕು| ವೈಶಾಲಿ,ಶಾಲಾ ವಿದ್ಯಾರ್ಥಿ ನಾಯಕ ಧನ್ ರಾಜ್ ಹೆಗ್ಡೆ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯೋಪಾಧ್ಯಾಯರು ಸ್ವಾಗತಿಸಿದರು, ಶ್ರೀಮತಿ ಸೌಮ್ಯ ಧನ್ಯವಾದ ಸಮರ್ಪಿಸಿದರು,ಕು| ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು

Related posts

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya
error: Content is protected !!