22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ  “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತರಬೇತುದಾರ  ಶ್ರೀಕಾಂತ್ ಪೂಜಾರಿರವರು ಹಾಗೂ ಜೀವನ ಕೌಶಲ್ಯ ತರಬೇತುದಾರರು ಮತ್ತು ಎಸ್ ಡಿ ಎಂ  ಕಾಲೇಜು  ಉಜಿರೆ ಇಲ್ಲಿನ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ  ಮಹೇಶ್ ಕುಮಾರ್ ಶೆಟ್ಟಿ, ಇವರು  ಜೀವನ ನಿರ್ವಹಣೆ, ಸವಾಲುಗಳನ್ನು ಎದುರಿಸುವ ಕುರಿತು ತರಬೇತಿ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ರವರು ” ಒಬ್ಬ ವ್ಯಕ್ತಿಯಲ್ಲಿ ಜೀವನ ಕೌಶಲ್ಯ  ಬಹಳ ಅವಶ್ಯಕ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಸವಾಲುಗಳನ್ನು ಎದುರಿಸಿ ಬದುಕುವ ಕೌಶಲ್ಯ ಪಡೆದುಕೊಳ್ಳಬೇಕು” ಎಂದು ಹೇಳಿದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್ ಉಪಸ್ಥಿತರಿದ್ದರು.

 ಸ್ವಯಂ ಸೇವಕಿ ಸುಪೇಕ್ಷಾ ನಿರೂಪಿಸಿ, ಸ್ವಯಂ ಸೇವಕ ವಿನೋದ್ ಸ್ವಾಗತಿಸಿ, ಸ್ವಯಂ ಸೇವಕಿ ದೀಪ್ತಿ ವಂದಿಸಿದರು.

Related posts

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!