September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜು, ಉಜಿರೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು “ಪಯಣ” ವಿಂಟೇಜ್ ಕಾರುಗಳ ಸಂಗ್ರಹಾಲಯ, ಮೈಸೂರು- ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂ.21 ರಂದು ಶನಿವಾರ ಬೆಳಿಗ್ಯೆ ಏಳು ಗಂಟೆಯಿಂದ ಮೈಸೂರಿನಲ್ಲಿ “ಪಯಣ” ಆವರಣದಲ್ಲಿರುವ ಸಭಾಭವನದಲ್ಲಿ ಹನ್ನೊಂದನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದೆ ಎಂದು ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಮತ್ತು ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ತಿಳಿಸಿದ್ದಾರೆ.


ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಸಮಾರಂಭವನ್ನು ಉದ್ಘಾಟಿಸುವರು.


ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಬಂಡಿಸಿದ್ದೇಗೌಡ ಮತ್ತು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಾಶಂಸನೆ ಮಾಡುವರು.


ಮೈಸೂರಿನಲ್ಲಿ ವಿವಿಧ ಕೇಂದ್ರಗಳಲ್ಲಿ ಈಗಾಗಲೆ ಸಾರ್ವಜನಿಕರಿಗೆ ಯೋಗ ತರಬೇತಿ ಶಿಬಿರ ನಡೆಸಿದ್ದು, ಇಲ್ಲಿ ತರಬೇತಿ ಪಡೆದ 3500 ಮಂದಿ “ಪಯಣ”ದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಲ್ಲಿ ಭಾಗವಹಿಸುವರು.


ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಆಶ್ರಯದಲ್ಲಿ ನಡೆಸಲ್ಪಡುವ ಎಲ್ಲಾ 54 ಶಿಕ್ಷಣ ಸಂಸ್ಥೆಗಳಲ್ಲಿ ಕೂಡಾ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya
error: Content is protected !!