ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ.19 ರಂದು ನಡೆಯಿತು.

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಚುನಾವಣಾ ಅಧಿಸೂಚನೆಯಿಂದ ಹಿಡಿದು ಪ್ರಮಾಣ ಪತ್ರ ನೀಡುವಲ್ಲಿ ತನಕ ಮತ್ತು ಮತಯಂತ್ರದ (ಇ.ವಿ.ಯಂ.) ಮೂಲಕ ಮತದಾನ ನಡೆಯಿತು.

ಮುಖ್ಯ ಶಿಕ್ಷಕ ಜಯರಾಮ ಮಯ್ಯ, ಚುನಾವಣಾಧಿಕಾರಿ ಶಿಕ್ಷಕ ಕಿರಣ್ ಹಾಗೂ ಇತರ ಶಿಕ್ಷಕ ವರ್ಗದ ಸಹಯೋಗದೊಂದಿಗೆ ಚುನಾವಣ ಪ್ರಕ್ರಿಯೆ ನಡೆಯಿತು.

ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಮೋಹನ್ ಕೃಷ್ಣ, ಉಪನಾಯಕಿಯಾಗಿ 9ನೇ ತರಗತಿಯ ನೇತ್ರಾವತಿ, ಕಾರ್ಯದರ್ಶಿಯಾಗಿ 10ನೇ ತರಗತಿಯ ಮನೀಷ್ ಚುನಾಯಿತರಾದರು.

ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಮಾಣಪತ್ರ ನೀಡಿ ಅಭಿನಂದಿಸಲಾಯಿತು.

ಇಡೀ ಚುನಾವಣಾ ಪ್ರಕ್ರಿಯೆಯ ಅರಿವನ್ನು ಪಡೆದ ವಿದ್ಯಾರ್ಥಿಗಳು ಉತ್ಸಾಹದಿಂದ ಮತ ಚಲಾಯಿಸಿದ್ದಕ್ಕಾಗಿ ಅವರಿಗೆ ಪೆನ್ನನ್ನು ಉಡುಗೊರೆಯಾಗಿ ನೀಡಲಾಯಿತು .

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya
error: Content is protected !!