July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ


ಬೆಳ್ತಂಗಡಿ : ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಸಭೆ,‌ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ.20 ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು.

ತಾಲೂಕು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಅಧ್ಯಕ್ಷತೆಯನ್ನು ವಹಿಸಿ ಒಕ್ಕೂಟದ ವತಿಯಿಂದ ಮಾಡಬಹುದಾದ ಕೆಲಸಗಳ ಬಗ್ಗೆ ತಿಳಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇಲಾಖಾ ಭೇಟಿ ಮೂಲಕ ಜಾಲಬಂಧ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಸಮೂದಾಯ ಆರೋಗ್ಯ ಕೇಂದ್ರ ಬೆಳ್ತಂಗಡಿ ಇಲ್ಲಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ ರವರು ಮಾಹಿತಿ ನೀಡಿದರು. ಆರೋಗ್ಯ ಕೇಂದ್ರ ವಠಾರದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ, ಸಂಯೋಜಕರಾದ ಶ್ರೀಮತಿ ಸಿಸಿಲ್ಯಾ ತಾವ್ರೊ, ಕಾರ್ಯಕರ್ತರಾದ ಮಾರ್ಕ್ ಡಿಸೋಜಾ ತಾಲೂಕು ಒಕ್ಕೂಟದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ಶ್ರೀಮತಿ ಸಂಧ್ಯಾ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು. ಪ್ರಾರ್ಥನೆ ಯನ್ನೂ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಿನ್ಸಿ ರಾಜೇಶ್ ಹಾಗೂ ಕಾರ್ಯದರ್ಶಿ ಉಷಾ ನೆರವೇರಿಸಿದರು.

Related posts

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya
error: Content is protected !!