September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲ ಫಾ!ವಿಜಯ್ ಲೋಬೋ ಅವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರಾದ ಡಾ.ಅಬಿಟೋನ್ ಹಾಗೂ ಶಾರೀರಿಕ ಶಿಕ್ಷಕರಾದ ವಸಂತ ಹೆಗ್ಢೆ ಹಾಗು ನಿಶ್ಚಿತ್ ಅವರ ಜೊತೆಗೂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ವೈದ್ಯರಾದ ಡಾ.ಅಬಿಟೋನ್, ತಮ್ಮ ಸಂದೇಶದಲ್ಲಿ ಯೋಗವನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವ ರೀತಿ ಜೀವನ ಶೈಲಿಯನ್ನು ಸುಧಾರಿಸಬಹುದು ಎಂದು ಹೇಳಿದರು. ಪ್ರಾಂಶುಪಾಲರು ತಮ್ಮ ಮಾತಿನಲ್ಲಿ ಇಂದು ಯೋಗದ ಕುರಿತು ಕೇವಲ ಭಾರತ ಮಾತ್ರವಲ್ಲ ಜಗತ್ತೇ ಮಾತನಾಡುತ್ತಿದೆ. ಆಧುನಿಕತೆಯ ಭರಾಟೆಯ ನಡುವೆ ಯೋಗದ ಮಹತ್ವವನ್ನು ವಿದೇಶಿಯರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಮೂರು ದಿನದ ಯೋಗ ತರಬೇತಿಯನ್ನು ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ವೈದ್ಯವಿದ್ಯಾರ್ಥಿಗಳಾದ ಸುಪ್ರಿತಾ ಭಟ್, ಪ್ರಕೃತಿ, ಸಾರಂಗಿರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿತೆ ನಡೆಯಿತು. ಹಿರಿಯ ಶಿಕ್ಷಕಿ ವಿನಯಲತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya
error: Content is protected !!