July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಅವರು ಯೋಗ ಒಂದು ಸಿದ್ಧಿ. ಇದು ಯಾವುದೇ ಒಂದು ಧರ್ಮಕ್ಕೆ ಸೀಮಿತವಲ್ಲ, ಇದು ಸರ್ವವ್ಯಾಪಿಯಾಗಿದ್ದು ಎಲ್ಲಾ ಕಾಯಿಲೆಗೂ ರಾಮಬಾಣವಾಗಿದೆ ಎಂದು ಹೇಳಿದರು.

ಹಾಗೆಯೇ ಕಾರ್ಯಕ್ರಮದ ಅತಿಥಿಯಾದ ದ್ವಿತೀಯ ಬಿ.ಎಡ್. ನ ಪ್ರಶಿಕ್ಷಣಾರ್ಥಿ ದಾಕ್ಷಾಯಣಿಯವರು ಯೋಗದ ಅರ್ಥ ಹಾಗೂ ಮಹತ್ವವನ್ನು ತಿಳಿಸುತ್ತಾ ಯೋಗ ಮನಸ್ಸನ್ನು ಕೇಂದ್ರೀಕರಿಸಲು ಸಹಾಯಕವಾಗಿದೆ. ಆಮೆ ಮತ್ತು ಮೊಸಳೆಗಳ ಉಸಿರಾಟ ಕ್ರಿಯೆಯು ಪ್ರಾಣಾಯಾಮದಂತೆ ಇರುವುದರಿಂದ ಅವುಗಳು ದೀರ್ಘಾಯುಸ್ಸನ್ನು ಹೊಂದಿವೆ. ಯೋಗವು ಉತ್ತಮ ಜೀವನವನ್ನು ರೂಪಿಸಲು ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿ ಸಂಘದ ಉಪನಾಯಕಿ ಸಾಯಿಧೃತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಹಾಗೂ ಪ್ರಥಮ ಮತ್ತು ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಮಹಾಂತೇಶ್ ಸ್ವಾಗತಿಸಿ, ರಕ್ಷಿತ ವಂದಿಸಿ, ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!