23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಉಜಿರೆ: “ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕು. ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು.” ಎಂದು ಶ್ರೀ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ಧನ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಹಳೆ ವಿದ್ಯಾರ್ಥಿ ಹಾಗೂ ಶಾಲಾ ನಾಯಕನಾಗಿದ್ದ ಪ್ರಾಂಜಲ್ ಶೆಟ್ಟಿ ಹಾಗೂ ಪ್ರಸ್ತುತ ಶಾಲಾ ನಾಯಕನಾಗಿ ಆಯ್ಕೆಗೊಂಡಿರುವ ಸಿಯೋನ್ ರಾಜ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶಶಾಂಕ್ ಮತ್ತು ಕ್ರಿಸ್ಟಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಚಿಂತನ್ ವಂದಿಸಿದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya
error: Content is protected !!