22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾರತೀಯ ಡೆಂಟಲ್ ಅಸೋಸಿಯೇಷನ್ ನ ಪುತ್ತೂರು ಶಾಖೆಯ ಅಧ್ಯಕ್ಷೆ ಡಾ| ಆಶಾ ರಾಘವೇಂದ್ರ ಪಿದಮಲೆ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಯೋಗವು ಮನಸ್ಸಿಗೆ ಆನಂದ ನೀಡುತ್ತದೆ, ಕೋಪವನ್ನು ನಿಯಂತ್ರಿಸುತ್ತದೆ. ತಾಳ್ಮೆ ಎನ್ನುವ ಜೀವನಪಾಠವನ್ನು ಕಲಿಸುತ್ತದೆ ಎಂದರು.

ಮುಖ್ಯ ಅತಿಥಿ, ಉಜಿರೆಯ ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯ ಪ್ರಾಧ್ಯಾಪಕ ಡಾ| ಪ್ರಣವ್ ಪಿ.ಪಿ. ಮಾತನಾಡಿ, ಯೋಗವು ಮಾನಸಿಕವಾಗಿ ದೈಹಿಕವಾಗಿ ಪರಿಣಾಮ ಬಿರುತ್ತದೆ. ರಕ್ತದೊತ್ತಡ, ಸಕ್ಕರೆ ಕಾಯಿಲೆ, ಅಸ್ತಮಾ ಮುಂತಾದ ಸಮಸ್ಯೆಗಳನ್ನು ಯೋಗದಿಂದ ಗುಣಪಡಿಸಬಹುದು. ಕೋವಿಡ್ ಸಂದರ್ಭದಲ್ಲಿ ಯೋಗ ಉಪಯೋಗವಾಗಿದೆ ಎಂದರು. ಯೋಗದ ಒಂದು ಶುದ್ಧೀಕರಣ ವ್ಯಾಯಾಮವಾದ ನೌಲಿ ಕ್ರಿಯೆಯ ಪ್ರಾತ್ಯಕ್ಷಿಕೆಯನ್ನು ಮಾಡಿ ತೋರಿಸಿದರು.

ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಶಿಕ್ಷಣ ಸಂಯೋಜಕ ಶಶಿಶೇಖರ್ ಎನ್. ಕಾಕತ್ಕರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್, ಯೋಗ ತರಬೇತುದಾರರು, ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಕ್ಷಮಾ ಮತ್ತು ಅಮೃತವರ್ಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಸುರೇಶ್ ಕೆ. ಸ್ವಾಗತಿಸಿದರು. ಸಂಸ್ಕೃತ ಅಧ್ಯಾಪಕಿ ಭಾಗ್ಯಲಕ್ಷ್ಮೀ ಅತಿಥಿ ಪರಿಚಯ ನೀಡಿದರು. 8ನೇ ತರಗತಿ ವಿದ್ಯಾಥಿನಿಯರು ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮ ಸಂಘಟಕ, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ವಂದಿಸಿದರು. ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya
error: Content is protected !!