25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಕ್ಯಪದವು: ಎಲ್‌. ಸಿ. ಆರ್. ವಿದ್ಯಾ ಸಂಸ್ಥೆ ವಿಶ್ವ ಯೋಗ ದಿನಾಚರಣೆ ” ಒಂದೇ ಭೂಮಿ ಒಂದೇ ಆರೋಗ್ಯ” ಎಂಬ ಘೋಷ ವಾಕ್ಯದೊಂದಿಗೆ ಸಂಸ್ಥೆಯಲ್ಲಿ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ಯನ್ನು ಜೂ.21ರಂದು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್‌ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ಜಿ ಕೆ ಪ್ರಾಸ್ತಾವಿಕ ನುಡಿಗಳೊಂದಿಗೆ “ಮಾಡಿದರೆ ಯೋಗ, ದೂರವಾಗುವುದು ರೋಗ” ಎಂಬ ಮಹತ್ವಪೂರ್ಣ ಮಾತಿನಂತೆ ಉತ್ತಮ ಆರೋಗ್ಯ, ಏಕಾಗ್ರತೆ ಹಾಗೂ ಸಮಚಿತ್ತಕ್ಕಾಗಿ ‘ಯೋಗ’ ಒಂದು ದಿವ್ಯೌಷಧ. ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತರಾಗಿರಿ ಎಂದು ಕಿವಿಮಾತನ್ನು ಹೇಳುತ್ತ ವಿದ್ಯಾರ್ಥಿಗಳಿಗೆ ಯೋಗಾಸನದ ಅರಿವನ್ನು ಮೂಡಿಸಿದರು.

ತರಗತಿವಾರು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಯೋಗಗಳನ್ನು ಮಾಡಿಸಿದರು. ಯೋಗಾಭ್ಯಾಸದ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯ ಗಮನಾರ್ಹ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಸಹ ಶಿಕ್ಷಕಿ ಸೌಮ್ಯ ಬಿ. ಆರ್. ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್‌ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕು.ವಿಜಯ ಹಾಗೂ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.


Related posts

ಉಜಿರೆ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ “ಶುಭ-ಗೋಲ್ಡ್” ಸ್ಕೀಮ್ ಪ್ರಾರಂಭ: ಸಂಸ್ಥೆಯ ನೂತನ ರಾಯಭಾರಿ ಚಲನಚಿತ್ರ ನಟಿ ಸಿಂಚನ ಪಿ ರಾವ್ ರಿಂದ ಪೋಸ್ಟರ್ ಅನಾವರಣ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya
error: Content is protected !!