September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಕ್ಯಪದವು: ಎಲ್‌. ಸಿ. ಆರ್. ವಿದ್ಯಾ ಸಂಸ್ಥೆ ವಿಶ್ವ ಯೋಗ ದಿನಾಚರಣೆ ” ಒಂದೇ ಭೂಮಿ ಒಂದೇ ಆರೋಗ್ಯ” ಎಂಬ ಘೋಷ ವಾಕ್ಯದೊಂದಿಗೆ ಸಂಸ್ಥೆಯಲ್ಲಿ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ಯನ್ನು ಜೂ.21ರಂದು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್‌ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ಜಿ ಕೆ ಪ್ರಾಸ್ತಾವಿಕ ನುಡಿಗಳೊಂದಿಗೆ “ಮಾಡಿದರೆ ಯೋಗ, ದೂರವಾಗುವುದು ರೋಗ” ಎಂಬ ಮಹತ್ವಪೂರ್ಣ ಮಾತಿನಂತೆ ಉತ್ತಮ ಆರೋಗ್ಯ, ಏಕಾಗ್ರತೆ ಹಾಗೂ ಸಮಚಿತ್ತಕ್ಕಾಗಿ ‘ಯೋಗ’ ಒಂದು ದಿವ್ಯೌಷಧ. ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತರಾಗಿರಿ ಎಂದು ಕಿವಿಮಾತನ್ನು ಹೇಳುತ್ತ ವಿದ್ಯಾರ್ಥಿಗಳಿಗೆ ಯೋಗಾಸನದ ಅರಿವನ್ನು ಮೂಡಿಸಿದರು.

ತರಗತಿವಾರು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಯೋಗಗಳನ್ನು ಮಾಡಿಸಿದರು. ಯೋಗಾಭ್ಯಾಸದ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯ ಗಮನಾರ್ಹ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಸಹ ಶಿಕ್ಷಕಿ ಸೌಮ್ಯ ಬಿ. ಆರ್. ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್‌ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕು.ವಿಜಯ ಹಾಗೂ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.


Related posts

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya
error: Content is protected !!