September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮೂಲಕ ಶಾಲೆಯ ಹಿರಿಯ ವಿದ್ಯಾರ್ಥಿ ಮತ್ತು ಸಾಪ್ಟ್ ವೇರ್ ಇಂಜೀನೀಯರ್ ಚೇತನ್ ಭಟ್ ಸಾದೂರು ಉದ್ಘಾಟಿಸಿದರು.

ಬಳಿಕ ಮಾತಾಡಿ ಯುವಜನತೆಗೆ ಉದ್ಯಮ ಮತ್ತು ಉದ್ಯೋಗದಲ್ಲಿ ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಯೋಗ ಬಹಳಷ್ಟು ಅನುಕೂಲವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಬಾಲ್ಯದಲ್ಲಿ ಯೋಗದ ಬಗ್ಗೆ ಆಸಕ್ತಿ ವಹಿಸಿಕೊಂಡು ಅಭ್ಯಾಸಿಸಿದರೆ ಮುಂದೆ ತಮ್ಮ ವೃತ್ತಿಜೀವನದಲ್ಲಿ ಖಂಡಿತಾ ಸಹಾಯವಾಗುತ್ತದೆ ಎಂದರು. ಸಂಪನ್ಮೂಲವ್ಯಕ್ತಿಯಾಗಿ ಶ್ರೀ ಧ್ರಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯ ಉಜಿರೆ ಇಲ್ಲಿಯ ವಿದ್ಯಾರ್ಥಿ ಡಾ ಶ್ರೀನಿವಾಸ್ ಕೆ , ಆಗಮಿಸಿ ಕರ್ಮಯೋಗ , ಭಕ್ತಿಯೋಗ ಜ್ಞಾನಯೋಗದ ಬಗ್ಗೆ ತಿಳಿಸಿ ಇದನ್ನು ವಿದ್ಯಾರ್ಥಿದೆಶೆಯಲ್ಲಿಯೇ ಅಭ್ಯಾಸಿಸದರೆ ವಿದ್ಯಾರ್ಥಿಯು ಯಶಸಸ್ನ್ನು ಸಾಧಿಸುವುದರೊಂದಿಗೆ ವಿಶೇಷ ಸಾಧನೆಯನ್ನು ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು ಮತ್ತು ಅಷ್ಟಾಂಗ ಯೋಗಗಳ ಅಭ್ಯಾಸವನ್ನು ಮಾಡುವ ಬಗ್ಗೆ ತಿಳಿಸಿಕೊಟ್ಟರು.

ಶ್ರೀ ಧ್ರಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯ ಉಜಿರೆ ಇಲ್ಲಿಯ ವಿದ್ಯಾರ್ಥಿ ಡಾ.ಕುಮಾರಿ ಅಭಿಜ್ಞಾ ಮತ್ತು ಡಾ.ಚಂದನ್ ಕಳೆದ ಐದು ದಿನಗಳಿಂದ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯೋಗಾಸನ ಮತ್ತು ಪ್ರಾಣಯಾಮದ ಬಗ್ಗೆ ತರಭೇತಿ ನೀಡಿರುತ್ತಾರೆ ಮತ್ತು ಈ ದಿನ ವಿದ್ಯಾರ್ಥಿಗಳಿಂದ ಯೋಗಾಸನದ ಪ್ರದರ್ಶನ ನಡಸಿಕೊಟ್ಟರು. ಸ.ಪ.ಪೂ .ಕಾಲೇಜು ಕೊಯ್ಯೂರು ಇಲ್ಲಿಯ ಪ್ರಾಚಾರ್ಯರಾದ ಶ್ರೀ ಮೋಹನ ಗೌಡ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು . ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ರಾಧಾಕೃಷ್ಣ ತಚ್ಚಮೆ ಅಧ್ಯಕ್ಷತೆ ವಹಸಿದ್ದರು. ಶ್ರೀ ರಾಮ ಚಂದ್ರ ದೊಡಮನಿ ಸ್ವಾಗತಿಸಿದರು. ಶ್ರೀ ಸುಧಾಕರ ಶೆಟ್ಟಿ ವಂದಿಸಿದರು. ಶ್ರೀ ಪ್ರವೀಣ್ ಕುಮಾರ್ ಎಚ್ ನಿರೂಪಿಸಿದರು .ಶ್ರೀಮತಿ ಬೇಬಿ, ಗೀತಾ ಉಡುಪಿ, ದೀಪ್ತಿ ಹೆಗ್ಡೆ, ಶ್ರೀ ಮೋಹಾನಂದ ಸಹಕರಿಸಿದರು.

Related posts

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಸುಲ್ಕೇರಿ ನಾಯಿದಗುರಿ ಅಂಗನವಾಡಿ ಕೇಂದ್ರಕ್ಕೆ ಚಪ್ಪಲ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!