September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯ ಉಪ್ಪಿನಂಗಡಿ ತಾಲೂಕು, ಗುರುವಾಯನಕೆರೆ ನಮ್ಮ ಮನೆ ಮತ್ತು ಪಾಂಡುರಂಗ ಶಾಖೆ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜಾರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಯೋಗ ದಿನಾಚರಣೆಯ ಮಹತ್ವ ತಿಳಿಸಿ ಶುಭಕೋರಿದರು. ಯೋಗ ಬಂಧು ಸಂತೋಷ್ ಕಾಪಿನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಸಂಸ್ಕಾರ, ಸೇವೆ, ಶಿಕ್ಷಣದ ಮೂಲಕ ಯೋಗ ತರಬೇತಿಯನ್ನು ನಡೆಸುತ್ತಾ ಸ್ವಸ್ಥ ಸಮಾಜಕ್ಕೆ ಬುನಾದಿ ಹಾಕಿದೆ ಎಂದರು. ಪಾಂಡುರಂಗ ಶಾಖೆಯ ಯೋಗಬಂಧು ವಿದ್ಯಾನಾಯಕ್ ಅಮೃತವಚನ ವಾಚಿಸಿದರು.

ಪ್ರವೀಣರವರು ಪಂಚಾಂಗ ಪಠನ ಮಾಡಿದರು. ಯೋಗ ಶಿಕ್ಷಕ ದಯಾನಂದ ಯಾದವರು ಮಾನಸಿಕ ಸಿದ್ಧತೆ, ಉಸಿರಾಟ ಕ್ರಿಯೆ, ಗಣಪತಿ ನಮಸ್ಕಾರ ನಡೆಸಿಕೊಟ್ಟರು. ಶ್ರೀಮತಿ ಜಯಶ್ರೀ ಹಾಗೂ ಲೋಕೇಶ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ನಮ್ಮ ಮನೆ ಶಾಖೆಯ ಯೋಗ ಶಿಕ್ಷಕ ಶಿವಣ್ಣ ಆಯುಷ್ ಪಠ್ಯ ಕ್ರಮದಂತೆ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಶ್ರೀಮತಿ ಪ್ರಿಯ ಹಾಗೂ ವಿನಯರವರು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಯೋಗ ಶಾಖೆಯ ಮಾರ್ಗದರ್ಶಕರಾದ ಪ್ರದೀಪ್ ಆಚಾರ್ಯರವರು ಯೋಗ ದಿನಾಚರಣಾ ಕಾರ್ಯಕ್ರಮದ ಸಮಾಪನ ನಡೆಸಿಕೊಟ್ಟರು. ಎಲ್ಲಾ ಯೋಗ ಬಂಧುಗಳು ಜೊತೆ ಸೇರಿ ಅಗ್ನಿ ಹೋತ್ರ ನಡೆಸಲಾಯಿತು. ಸುಮಾರು 100ರಷ್ಟು ಯೋಗಬಂಧುಗಳು ಭಾಗವಹಿಸಿದ್ದರು.

ನಮ್ಮ ಮನೆ ಶಾಖೆಯ ಶ್ರೀಮತಿ ಸುಮಲತಾ ಸ್ವಾಗತಿಸಿದರು. ರಾಮಚಂದ್ರ ಶೆಟ್ಟಿ ವಂದಿಸಿದರು.

Related posts

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya

ಆ.18: ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆ: ಬೆಳ್ತಂಗಡಿ ತಾಲೂಕಿನ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು: ಅನಿಲ್ ಕುಮಾರ್ ಯು

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya
error: Content is protected !!