September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

ಬೆಳ್ತಂಗಡಿ : ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಬೆಳ್ತಂಗಡಿ ಇಲ್ಲಿ ಜೂ.21ರಂದು ಸಂಭ್ರಮ ಶನಿವಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಗರ ಪುನರ್ವಸತಿ ಕಾರ್ಯಕರ್ತೆಯಾಗಿರುವ ಸ್ಟಾರ್ ವ್ಯುಮೆನ್ ಪ್ರಶಸ್ತಿ ಪಡೆದ ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಫೌಝಿಯಾ ರವರು ವಿಶೇಷ ಚೇತನರ ಸಂವಾದ ಕಾರ್ಯಕ್ರಮ ನಡೆಸಿದರು.

ಇವರು ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳೊಂದಿಗೆ ಸಂವಹನ ನಡೆಸಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಿಠಲ ಬಿ ಮತ್ತು ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯೊಂದಿಗೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಅವರು ತಾವು ತನ್ನ ವೈಕಲ್ಯತೆಯಿಂದ ನೋವು ಹಾಗೂ ಸಮಾಜವನ್ನು ಎದುರಿಸಿದ ರೀತಿಯನ್ನು ವಿವರವಾಗಿ ದೃಷ್ಟಾಂತದ ಮೂಲಕ ತಿಳಿಸಿದರು. ಲಕ್ಷ್ಮಿಕಾಂತ್ ಬೇಕಲ್ ಎಸ್ ಸ್ವಾಗತಿಸಿ, ಜ್ಯೋತಿ ಧನ್ಯವಾದವಿತ್ತರು.

Related posts

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya
error: Content is protected !!