September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.
ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು. ರೋಗಿಗಳಿಗೆ ನೀಡಲು ಔಷದ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಕೊರತೆ ಇಲ್ಲ ಹೆಚ್ಚುವರಿಯಾಗಿ ತರಿಸಿದ್ದೇವೆ ಎಂದು ತಿಳಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ವೈದ್ಯರು ನಿರ್ಲಕ್ಷ್ಯ ವಹಿಸಿದ ಬಗ್ಗೆ ವಿವರಣೆ ಪಡೆದುಕೊಂಡರು.

ಭೇಟಿಯಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ಪಿ.ಟಿ. ಕಳೆಂಜ, ನವೀನ್ ಗೌಡ ಸವಣಾಲು, ವೀರೇಂದ್ರ ಕುಮಾರ್ ಅಳದಂಗಡಿ, ರಶೀದ್ ಕಕ್ಕಿಂಜೆ, ವೆಂಕಣ್ಣ ಕೊಯ್ಯೂರು, ಸ್ಟೀವನ್ ಮೋನಿಸ್ ನಿಟ್ಟಡೆ, ಶ್ರೀಮತಿ ಸವಿತಾ ಸುಲ್ಕೇರಿ, ಹಾಗೂ ಯುವ ಕಾಂಗ್ರೆಸ್ ನ ವಿನಯ್ ಕುಮಾರ್ ಹಾಜರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!