July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.
ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು. ರೋಗಿಗಳಿಗೆ ನೀಡಲು ಔಷದ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಕೊರತೆ ಇಲ್ಲ ಹೆಚ್ಚುವರಿಯಾಗಿ ತರಿಸಿದ್ದೇವೆ ಎಂದು ತಿಳಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ವೈದ್ಯರು ನಿರ್ಲಕ್ಷ್ಯ ವಹಿಸಿದ ಬಗ್ಗೆ ವಿವರಣೆ ಪಡೆದುಕೊಂಡರು.

ಭೇಟಿಯಲ್ಲಿ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸೆಬಾಸ್ಟಿಯನ್ ಪಿ.ಟಿ. ಕಳೆಂಜ, ನವೀನ್ ಗೌಡ ಸವಣಾಲು, ವೀರೇಂದ್ರ ಕುಮಾರ್ ಅಳದಂಗಡಿ, ರಶೀದ್ ಕಕ್ಕಿಂಜೆ, ವೆಂಕಣ್ಣ ಕೊಯ್ಯೂರು, ಸ್ಟೀವನ್ ಮೋನಿಸ್ ನಿಟ್ಟಡೆ, ಶ್ರೀಮತಿ ಸವಿತಾ ಸುಲ್ಕೇರಿ, ಹಾಗೂ ಯುವ ಕಾಂಗ್ರೆಸ್ ನ ವಿನಯ್ ಕುಮಾರ್ ಹಾಜರಿದ್ದರು.

Related posts

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!