July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಮುಂಡಾಜೆ: ‘ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಉಜಿರೆಯ ಶ್ರೀ.ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹರ್ಷಿಣಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ‘ನಮ್ಮ ಮನಸ್ಸು ಮತ್ತು ದೇಹವನ್ನು ಹತೋಟಿಯಲ್ಲಿಡಲು ಯೋಗ ಉತ್ತಮವಾದ ವಿಧಾನ; ಪರಿಸರದೊಂದಿಗೆ ಅವಲಂಬಿತರಾದ ನಾವು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡಬೇಕು’ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಗೀತಾ ಮಾತನಾಡಿ, ಯೋಗದ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳಿಗೆ ಯೋಗದ ಪ್ರಸ್ತುತತೆಯನ್ನು ತಿಳಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಶ್ರಾವ್ಯ ನಿರೂಪಿಸಿ, ನಳಿನಿ ಧನ್ಯವಾದಗೈದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಯೋಗಪ್ರದರ್ಶನ ಹಾಗೂ ಶ್ಲೋಕ ಪಠಣ ನಡೆಯಿತು.

Related posts

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!