25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ ಬನ್ನಿಸ್ ಇದರ ಜಂಟಿ ಆಶಯದೊಂದಿಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆಯ ವಿದ್ಯಾರ್ಥಿನಿಯರಾದ ಕು| ಸಾನಿಧ್ಯ ಹಾಗೂ ಕುಮಾರಿ ಅನನ್ಯ ಆಗಮಿಸಿ ವಾರವಿಡೀ ವಿದ್ಯಾರ್ಥಿಗಳಿಗೆ ಯೋಗ ತರಬೇತು ನೀಡಿದ್ದು ಅವರು ವಾರವಿಡೀ ಹೇಳಿಕೊಟ್ಟ ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸಮಾರೋಪ ಸಮಾರಂಭವನ್ನು ಸಮಾಪ್ತಿಗೊಳಿಸಿದರು.

ಭಾರತ ಸ್ಕೌಟ್ ಗೈಡ್ ನ ವಿದ್ಯಾರ್ಥಿಗಳು ಬನ್ನಿ ಹಾಗೂ ಕಬ್ ಮತ್ತು ಬುಲ್ ಬುಲ್ ಗಳಿಗೆ ತಾವು ಕಲಿತಂತಹ ಆಸನಗಳ ತರಬೇತಿಯನ್ನು ನೀಡಿದರು. ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಕುಮಾರಿ ಇವರು ಅತಿಥಿಗಳಿಗೆ ಧನ್ಯವಾದವಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಶಾಲಾ ಕ್ರೀಡಾ ಸಂಘದ ಮಾರ್ಗದರ್ಶಕರಾಗಿರುವ ಸಂತೋಷ್ ಇವರ ಸಹಾಯದೊಂದಿಗೆ ಯೋಗ ದಿನಾಚರಣೆ ಸಂಪನ್ನಗೊಂಡಿತು. ಶಾಲಾ ಶಿಕ್ಷಕ ವೃಂದ, ಕಬ್ ಬುಲ್ ಬುಲ್ ಹಾಗೂ ಸ್ಕೌಟ್ ಹಾಗೂ ಗೈಡ್ ಇದರ ಜವಾಬ್ದಾರಿ ಹೊತ್ತ ಶಿಕ್ಷಕರು ಭಾಗವಹಿಸಿದ್ದರು.

Related posts

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya
error: Content is protected !!