23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ ಬನ್ನಿಸ್ ಇದರ ಜಂಟಿ ಆಶಯದೊಂದಿಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆಯ ವಿದ್ಯಾರ್ಥಿನಿಯರಾದ ಕು| ಸಾನಿಧ್ಯ ಹಾಗೂ ಕುಮಾರಿ ಅನನ್ಯ ಆಗಮಿಸಿ ವಾರವಿಡೀ ವಿದ್ಯಾರ್ಥಿಗಳಿಗೆ ಯೋಗ ತರಬೇತು ನೀಡಿದ್ದು ಅವರು ವಾರವಿಡೀ ಹೇಳಿಕೊಟ್ಟ ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸಮಾರೋಪ ಸಮಾರಂಭವನ್ನು ಸಮಾಪ್ತಿಗೊಳಿಸಿದರು.

ಭಾರತ ಸ್ಕೌಟ್ ಗೈಡ್ ನ ವಿದ್ಯಾರ್ಥಿಗಳು ಬನ್ನಿ ಹಾಗೂ ಕಬ್ ಮತ್ತು ಬುಲ್ ಬುಲ್ ಗಳಿಗೆ ತಾವು ಕಲಿತಂತಹ ಆಸನಗಳ ತರಬೇತಿಯನ್ನು ನೀಡಿದರು. ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಕುಮಾರಿ ಇವರು ಅತಿಥಿಗಳಿಗೆ ಧನ್ಯವಾದವಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಶಾಲಾ ಕ್ರೀಡಾ ಸಂಘದ ಮಾರ್ಗದರ್ಶಕರಾಗಿರುವ ಸಂತೋಷ್ ಇವರ ಸಹಾಯದೊಂದಿಗೆ ಯೋಗ ದಿನಾಚರಣೆ ಸಂಪನ್ನಗೊಂಡಿತು. ಶಾಲಾ ಶಿಕ್ಷಕ ವೃಂದ, ಕಬ್ ಬುಲ್ ಬುಲ್ ಹಾಗೂ ಸ್ಕೌಟ್ ಹಾಗೂ ಗೈಡ್ ಇದರ ಜವಾಬ್ದಾರಿ ಹೊತ್ತ ಶಿಕ್ಷಕರು ಭಾಗವಹಿಸಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya
error: Content is protected !!