September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ ಬನ್ನಿಸ್ ಇದರ ಜಂಟಿ ಆಶಯದೊಂದಿಗೆ ಜರುಗಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆಯ ವಿದ್ಯಾರ್ಥಿನಿಯರಾದ ಕು| ಸಾನಿಧ್ಯ ಹಾಗೂ ಕುಮಾರಿ ಅನನ್ಯ ಆಗಮಿಸಿ ವಾರವಿಡೀ ವಿದ್ಯಾರ್ಥಿಗಳಿಗೆ ಯೋಗ ತರಬೇತು ನೀಡಿದ್ದು ಅವರು ವಾರವಿಡೀ ಹೇಳಿಕೊಟ್ಟ ಯೋಗದ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸಮಾರೋಪ ಸಮಾರಂಭವನ್ನು ಸಮಾಪ್ತಿಗೊಳಿಸಿದರು.

ಭಾರತ ಸ್ಕೌಟ್ ಗೈಡ್ ನ ವಿದ್ಯಾರ್ಥಿಗಳು ಬನ್ನಿ ಹಾಗೂ ಕಬ್ ಮತ್ತು ಬುಲ್ ಬುಲ್ ಗಳಿಗೆ ತಾವು ಕಲಿತಂತಹ ಆಸನಗಳ ತರಬೇತಿಯನ್ನು ನೀಡಿದರು. ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಕುಮಾರಿ ಇವರು ಅತಿಥಿಗಳಿಗೆ ಧನ್ಯವಾದವಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಶಾಲಾ ಕ್ರೀಡಾ ಸಂಘದ ಮಾರ್ಗದರ್ಶಕರಾಗಿರುವ ಸಂತೋಷ್ ಇವರ ಸಹಾಯದೊಂದಿಗೆ ಯೋಗ ದಿನಾಚರಣೆ ಸಂಪನ್ನಗೊಂಡಿತು. ಶಾಲಾ ಶಿಕ್ಷಕ ವೃಂದ, ಕಬ್ ಬುಲ್ ಬುಲ್ ಹಾಗೂ ಸ್ಕೌಟ್ ಹಾಗೂ ಗೈಡ್ ಇದರ ಜವಾಬ್ದಾರಿ ಹೊತ್ತ ಶಿಕ್ಷಕರು ಭಾಗವಹಿಸಿದ್ದರು.

Related posts

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya
error: Content is protected !!