22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲ ಫಾ!ವಿಜಯ್ ಲೋಬೋ ಅವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರಾದ ಡಾ.ಅಬಿಟೋನ್ ಹಾಗೂ ಶಾರೀರಿಕ ಶಿಕ್ಷಕರಾದ ವಸಂತ ಹೆಗ್ಢೆ ಹಾಗು ನಿಶ್ಚಿತ್ ಅವರ ಜೊತೆಗೂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ವೈದ್ಯರಾದ ಡಾ.ಅಬಿಟೋನ್, ತಮ್ಮ ಸಂದೇಶದಲ್ಲಿ ಯೋಗವನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವ ರೀತಿ ಜೀವನ ಶೈಲಿಯನ್ನು ಸುಧಾರಿಸಬಹುದು ಎಂದು ಹೇಳಿದರು. ಪ್ರಾಂಶುಪಾಲರು ತಮ್ಮ ಮಾತಿನಲ್ಲಿ ಇಂದು ಯೋಗದ ಕುರಿತು ಕೇವಲ ಭಾರತ ಮಾತ್ರವಲ್ಲ ಜಗತ್ತೇ ಮಾತನಾಡುತ್ತಿದೆ. ಆಧುನಿಕತೆಯ ಭರಾಟೆಯ ನಡುವೆ ಯೋಗದ ಮಹತ್ವವನ್ನು ವಿದೇಶಿಯರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಮೂರು ದಿನದ ಯೋಗ ತರಬೇತಿಯನ್ನು ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ವೈದ್ಯವಿದ್ಯಾರ್ಥಿಗಳಾದ ಸುಪ್ರಿತಾ ಭಟ್, ಪ್ರಕೃತಿ, ಸಾರಂಗಿರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿತೆ ನಡೆಯಿತು. ಹಿರಿಯ ಶಿಕ್ಷಕಿ ವಿನಯಲತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya
error: Content is protected !!