September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲ ಫಾ!ವಿಜಯ್ ಲೋಬೋ ಅವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರಾದ ಡಾ.ಅಬಿಟೋನ್ ಹಾಗೂ ಶಾರೀರಿಕ ಶಿಕ್ಷಕರಾದ ವಸಂತ ಹೆಗ್ಢೆ ಹಾಗು ನಿಶ್ಚಿತ್ ಅವರ ಜೊತೆಗೂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ವೈದ್ಯರಾದ ಡಾ.ಅಬಿಟೋನ್, ತಮ್ಮ ಸಂದೇಶದಲ್ಲಿ ಯೋಗವನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವ ರೀತಿ ಜೀವನ ಶೈಲಿಯನ್ನು ಸುಧಾರಿಸಬಹುದು ಎಂದು ಹೇಳಿದರು. ಪ್ರಾಂಶುಪಾಲರು ತಮ್ಮ ಮಾತಿನಲ್ಲಿ ಇಂದು ಯೋಗದ ಕುರಿತು ಕೇವಲ ಭಾರತ ಮಾತ್ರವಲ್ಲ ಜಗತ್ತೇ ಮಾತನಾಡುತ್ತಿದೆ. ಆಧುನಿಕತೆಯ ಭರಾಟೆಯ ನಡುವೆ ಯೋಗದ ಮಹತ್ವವನ್ನು ವಿದೇಶಿಯರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಮೂರು ದಿನದ ಯೋಗ ತರಬೇತಿಯನ್ನು ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ವೈದ್ಯವಿದ್ಯಾರ್ಥಿಗಳಾದ ಸುಪ್ರಿತಾ ಭಟ್, ಪ್ರಕೃತಿ, ಸಾರಂಗಿರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿತೆ ನಡೆಯಿತು. ಹಿರಿಯ ಶಿಕ್ಷಕಿ ವಿನಯಲತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

Suddi Udaya
error: Content is protected !!