22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲ ಫಾ!ವಿಜಯ್ ಲೋಬೋ ಅವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರಾದ ಡಾ.ಅಬಿಟೋನ್ ಹಾಗೂ ಶಾರೀರಿಕ ಶಿಕ್ಷಕರಾದ ವಸಂತ ಹೆಗ್ಢೆ ಹಾಗು ನಿಶ್ಚಿತ್ ಅವರ ಜೊತೆಗೂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ವೈದ್ಯರಾದ ಡಾ.ಅಬಿಟೋನ್, ತಮ್ಮ ಸಂದೇಶದಲ್ಲಿ ಯೋಗವನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವ ರೀತಿ ಜೀವನ ಶೈಲಿಯನ್ನು ಸುಧಾರಿಸಬಹುದು ಎಂದು ಹೇಳಿದರು. ಪ್ರಾಂಶುಪಾಲರು ತಮ್ಮ ಮಾತಿನಲ್ಲಿ ಇಂದು ಯೋಗದ ಕುರಿತು ಕೇವಲ ಭಾರತ ಮಾತ್ರವಲ್ಲ ಜಗತ್ತೇ ಮಾತನಾಡುತ್ತಿದೆ. ಆಧುನಿಕತೆಯ ಭರಾಟೆಯ ನಡುವೆ ಯೋಗದ ಮಹತ್ವವನ್ನು ವಿದೇಶಿಯರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಮೂರು ದಿನದ ಯೋಗ ತರಬೇತಿಯನ್ನು ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ವೈದ್ಯವಿದ್ಯಾರ್ಥಿಗಳಾದ ಸುಪ್ರಿತಾ ಭಟ್, ಪ್ರಕೃತಿ, ಸಾರಂಗಿರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿತೆ ನಡೆಯಿತು. ಹಿರಿಯ ಶಿಕ್ಷಕಿ ವಿನಯಲತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya
error: Content is protected !!