25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲ ಫಾ!ವಿಜಯ್ ಲೋಬೋ ಅವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರಾದ ಡಾ.ಅಬಿಟೋನ್ ಹಾಗೂ ಶಾರೀರಿಕ ಶಿಕ್ಷಕರಾದ ವಸಂತ ಹೆಗ್ಢೆ ಹಾಗು ನಿಶ್ಚಿತ್ ಅವರ ಜೊತೆಗೂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜಿನ ವೈದ್ಯರಾದ ಡಾ.ಅಬಿಟೋನ್, ತಮ್ಮ ಸಂದೇಶದಲ್ಲಿ ಯೋಗವನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಯಾವ ರೀತಿ ಜೀವನ ಶೈಲಿಯನ್ನು ಸುಧಾರಿಸಬಹುದು ಎಂದು ಹೇಳಿದರು. ಪ್ರಾಂಶುಪಾಲರು ತಮ್ಮ ಮಾತಿನಲ್ಲಿ ಇಂದು ಯೋಗದ ಕುರಿತು ಕೇವಲ ಭಾರತ ಮಾತ್ರವಲ್ಲ ಜಗತ್ತೇ ಮಾತನಾಡುತ್ತಿದೆ. ಆಧುನಿಕತೆಯ ಭರಾಟೆಯ ನಡುವೆ ಯೋಗದ ಮಹತ್ವವನ್ನು ವಿದೇಶಿಯರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಮೂರು ದಿನದ ಯೋಗ ತರಬೇತಿಯನ್ನು ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ವೈದ್ಯವಿದ್ಯಾರ್ಥಿಗಳಾದ ಸುಪ್ರಿತಾ ಭಟ್, ಪ್ರಕೃತಿ, ಸಾರಂಗಿರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿತೆ ನಡೆಯಿತು. ಹಿರಿಯ ಶಿಕ್ಷಕಿ ವಿನಯಲತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!