22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಅವರು ಯೋಗ ಒಂದು ಸಿದ್ಧಿ. ಇದು ಯಾವುದೇ ಒಂದು ಧರ್ಮಕ್ಕೆ ಸೀಮಿತವಲ್ಲ, ಇದು ಸರ್ವವ್ಯಾಪಿಯಾಗಿದ್ದು ಎಲ್ಲಾ ಕಾಯಿಲೆಗೂ ರಾಮಬಾಣವಾಗಿದೆ ಎಂದು ಹೇಳಿದರು.

ಹಾಗೆಯೇ ಕಾರ್ಯಕ್ರಮದ ಅತಿಥಿಯಾದ ದ್ವಿತೀಯ ಬಿ.ಎಡ್. ನ ಪ್ರಶಿಕ್ಷಣಾರ್ಥಿ ದಾಕ್ಷಾಯಣಿಯವರು ಯೋಗದ ಅರ್ಥ ಹಾಗೂ ಮಹತ್ವವನ್ನು ತಿಳಿಸುತ್ತಾ ಯೋಗ ಮನಸ್ಸನ್ನು ಕೇಂದ್ರೀಕರಿಸಲು ಸಹಾಯಕವಾಗಿದೆ. ಆಮೆ ಮತ್ತು ಮೊಸಳೆಗಳ ಉಸಿರಾಟ ಕ್ರಿಯೆಯು ಪ್ರಾಣಾಯಾಮದಂತೆ ಇರುವುದರಿಂದ ಅವುಗಳು ದೀರ್ಘಾಯುಸ್ಸನ್ನು ಹೊಂದಿವೆ. ಯೋಗವು ಉತ್ತಮ ಜೀವನವನ್ನು ರೂಪಿಸಲು ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿ ಸಂಘದ ಉಪನಾಯಕಿ ಸಾಯಿಧೃತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಹಾಗೂ ಪ್ರಥಮ ಮತ್ತು ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಮಹಾಂತೇಶ್ ಸ್ವಾಗತಿಸಿ, ರಕ್ಷಿತ ವಂದಿಸಿ, ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya
error: Content is protected !!