22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಅವರು ಯೋಗ ಒಂದು ಸಿದ್ಧಿ. ಇದು ಯಾವುದೇ ಒಂದು ಧರ್ಮಕ್ಕೆ ಸೀಮಿತವಲ್ಲ, ಇದು ಸರ್ವವ್ಯಾಪಿಯಾಗಿದ್ದು ಎಲ್ಲಾ ಕಾಯಿಲೆಗೂ ರಾಮಬಾಣವಾಗಿದೆ ಎಂದು ಹೇಳಿದರು.

ಹಾಗೆಯೇ ಕಾರ್ಯಕ್ರಮದ ಅತಿಥಿಯಾದ ದ್ವಿತೀಯ ಬಿ.ಎಡ್. ನ ಪ್ರಶಿಕ್ಷಣಾರ್ಥಿ ದಾಕ್ಷಾಯಣಿಯವರು ಯೋಗದ ಅರ್ಥ ಹಾಗೂ ಮಹತ್ವವನ್ನು ತಿಳಿಸುತ್ತಾ ಯೋಗ ಮನಸ್ಸನ್ನು ಕೇಂದ್ರೀಕರಿಸಲು ಸಹಾಯಕವಾಗಿದೆ. ಆಮೆ ಮತ್ತು ಮೊಸಳೆಗಳ ಉಸಿರಾಟ ಕ್ರಿಯೆಯು ಪ್ರಾಣಾಯಾಮದಂತೆ ಇರುವುದರಿಂದ ಅವುಗಳು ದೀರ್ಘಾಯುಸ್ಸನ್ನು ಹೊಂದಿವೆ. ಯೋಗವು ಉತ್ತಮ ಜೀವನವನ್ನು ರೂಪಿಸಲು ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿ ಸಂಘದ ಉಪನಾಯಕಿ ಸಾಯಿಧೃತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಹಾಗೂ ಪ್ರಥಮ ಮತ್ತು ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಮಹಾಂತೇಶ್ ಸ್ವಾಗತಿಸಿ, ರಕ್ಷಿತ ವಂದಿಸಿ, ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!