25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಕ್ಯಪದವು: ಎಲ್‌. ಸಿ. ಆರ್. ವಿದ್ಯಾ ಸಂಸ್ಥೆ ವಿಶ್ವ ಯೋಗ ದಿನಾಚರಣೆ ” ಒಂದೇ ಭೂಮಿ ಒಂದೇ ಆರೋಗ್ಯ” ಎಂಬ ಘೋಷ ವಾಕ್ಯದೊಂದಿಗೆ ಸಂಸ್ಥೆಯಲ್ಲಿ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ಯನ್ನು ಜೂ.21ರಂದು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್‌ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ಜಿ ಕೆ ಪ್ರಾಸ್ತಾವಿಕ ನುಡಿಗಳೊಂದಿಗೆ “ಮಾಡಿದರೆ ಯೋಗ, ದೂರವಾಗುವುದು ರೋಗ” ಎಂಬ ಮಹತ್ವಪೂರ್ಣ ಮಾತಿನಂತೆ ಉತ್ತಮ ಆರೋಗ್ಯ, ಏಕಾಗ್ರತೆ ಹಾಗೂ ಸಮಚಿತ್ತಕ್ಕಾಗಿ ‘ಯೋಗ’ ಒಂದು ದಿವ್ಯೌಷಧ. ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತರಾಗಿರಿ ಎಂದು ಕಿವಿಮಾತನ್ನು ಹೇಳುತ್ತ ವಿದ್ಯಾರ್ಥಿಗಳಿಗೆ ಯೋಗಾಸನದ ಅರಿವನ್ನು ಮೂಡಿಸಿದರು.

ತರಗತಿವಾರು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಯೋಗಗಳನ್ನು ಮಾಡಿಸಿದರು. ಯೋಗಾಭ್ಯಾಸದ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯ ಗಮನಾರ್ಹ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಸಹ ಶಿಕ್ಷಕಿ ಸೌಮ್ಯ ಬಿ. ಆರ್. ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್‌ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕು.ವಿಜಯ ಹಾಗೂ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.


Related posts

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya
error: Content is protected !!