23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯ ಉಪ್ಪಿನಂಗಡಿ ತಾಲೂಕು, ಗುರುವಾಯನಕೆರೆ ನಮ್ಮ ಮನೆ ಮತ್ತು ಪಾಂಡುರಂಗ ಶಾಖೆ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜಾರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಯೋಗ ದಿನಾಚರಣೆಯ ಮಹತ್ವ ತಿಳಿಸಿ ಶುಭಕೋರಿದರು. ಯೋಗ ಬಂಧು ಸಂತೋಷ್ ಕಾಪಿನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಸಂಸ್ಕಾರ, ಸೇವೆ, ಶಿಕ್ಷಣದ ಮೂಲಕ ಯೋಗ ತರಬೇತಿಯನ್ನು ನಡೆಸುತ್ತಾ ಸ್ವಸ್ಥ ಸಮಾಜಕ್ಕೆ ಬುನಾದಿ ಹಾಕಿದೆ ಎಂದರು. ಪಾಂಡುರಂಗ ಶಾಖೆಯ ಯೋಗಬಂಧು ವಿದ್ಯಾನಾಯಕ್ ಅಮೃತವಚನ ವಾಚಿಸಿದರು.

ಪ್ರವೀಣರವರು ಪಂಚಾಂಗ ಪಠನ ಮಾಡಿದರು. ಯೋಗ ಶಿಕ್ಷಕ ದಯಾನಂದ ಯಾದವರು ಮಾನಸಿಕ ಸಿದ್ಧತೆ, ಉಸಿರಾಟ ಕ್ರಿಯೆ, ಗಣಪತಿ ನಮಸ್ಕಾರ ನಡೆಸಿಕೊಟ್ಟರು. ಶ್ರೀಮತಿ ಜಯಶ್ರೀ ಹಾಗೂ ಲೋಕೇಶ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ನಮ್ಮ ಮನೆ ಶಾಖೆಯ ಯೋಗ ಶಿಕ್ಷಕ ಶಿವಣ್ಣ ಆಯುಷ್ ಪಠ್ಯ ಕ್ರಮದಂತೆ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಶ್ರೀಮತಿ ಪ್ರಿಯ ಹಾಗೂ ವಿನಯರವರು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಯೋಗ ಶಾಖೆಯ ಮಾರ್ಗದರ್ಶಕರಾದ ಪ್ರದೀಪ್ ಆಚಾರ್ಯರವರು ಯೋಗ ದಿನಾಚರಣಾ ಕಾರ್ಯಕ್ರಮದ ಸಮಾಪನ ನಡೆಸಿಕೊಟ್ಟರು. ಎಲ್ಲಾ ಯೋಗ ಬಂಧುಗಳು ಜೊತೆ ಸೇರಿ ಅಗ್ನಿ ಹೋತ್ರ ನಡೆಸಲಾಯಿತು. ಸುಮಾರು 100ರಷ್ಟು ಯೋಗಬಂಧುಗಳು ಭಾಗವಹಿಸಿದ್ದರು.

ನಮ್ಮ ಮನೆ ಶಾಖೆಯ ಶ್ರೀಮತಿ ಸುಮಲತಾ ಸ್ವಾಗತಿಸಿದರು. ರಾಮಚಂದ್ರ ಶೆಟ್ಟಿ ವಂದಿಸಿದರು.

Related posts

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಯುದ್ದ ಖಂಡಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ‌ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!