23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ.

ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ ಬಜಿರೆ ಎಂಬಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ತಾಲೂಕು ಗುಂಡೂರಿ ಗ್ರಾಮದ ಗುಂಡೂರಿ ಬಳಿ ಇರುವ ದಿನಸಿ ಅಂಗಡಿಯಲ್ಲಿ ಹರೀಶ್‌ ಎಂಬಾತನು ಅಕ್ರಮವಾಗಿ ಮದ್ಯವನ್ನು ದಾಸ್ತಾನು ಇರಿಸಿ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಪೋಲಿಸರು ಗೆ ದಾಳಿ ನಡೆಸಿ ಅಂಗಡಿಯಲ್ಲಿದ್ದ ಒಂದು ಪ್ಲಾಸ್ಟಿಕ್‌ ಚೀಲದಲ್ಲಿ 90 ML ಸಾಮರ್ಥ್ಯದ 44 ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ಪತ್ತೆ ಹಚ್ಚಲಾದ ಮದ್ಯದ ಒಟ್ಟು ಪ್ರಮಾಣ 3.960 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ 1760/- ಆಗಿರುತ್ತದೆ. ಈ ಬಗ್ಗೆ ವೇಣೂರು ಪೋಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya
error: Content is protected !!